ಆ್ಯಪ್ನಗರ

ಅನಂತಕುಮಾರ್ ಹೆಗಡೆ ಹೊಲಸು ಮನುಷ್ಯ: ಸಚಿವ ರಮೇಶ್ ಜಾರಕಿಹೊಳಿ

ಅನಂತಕುಮಾರ್ ಹೆಗಡೆ ಹೊಲಸು ಮನುಷ್ಯ. ಅವನ ಬಗ್ಗೆ ಮಾತನಾಡುವುದು ಹೇಸಿಗೆ ವಿಷಯ ಎಂದು ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಅವರು ಕೇಂದ್ರ ಕೌಶಲಾಭಿವೃದ್ಧಿ ಸಚಿವರ ವಿರುದ್ಧ ಹರಿಹಾಯ್ದಿದ್ದಾರೆ.

Vijaya Karnataka Web 15 Jul 2018, 12:43 pm
ಬೆಳಗಾವಿ: ಅನಂತಕುಮಾರ್ ಹೆಗಡೆ ಹೊಲಸು ಮನುಷ್ಯ. ಅವನ ಬಗ್ಗೆ ಮಾತನಾಡುವುದು ಹೇಸಿಗೆ ವಿಷಯ ಎಂದು ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಅವರು ಕೇಂದ್ರ ಕೌಶಲಾಭಿವೃದ್ಧಿ ಸಚಿವರ ವಿರುದ್ಧ ಹರಿಹಾಯ್ದಿದ್ದಾರೆ.
Vijaya Karnataka Web ramesh jarkiholi


ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಭಾನುವಾರ ಆಯೋಜಿಸಿದ್ದ ನಗರ ಸ್ಥಳೀಯ ಸಂಸ್ಥೆಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಾಗಾರದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. "ಬಿಜೆಪಿ ರಾಷ್ಟ್ರೀಯ ಪಕ್ಷ. ಅದರ ಬಗ್ಗೆ ಅಭಿಮಾನ ಇದೆ. ಆದರೆ, ಆ ವ್ಯಕ್ತಿ ಬಗ್ಗೆ ಮಾತನಾಡಲು ಹೇಸಿಗೆ ಬರುತ್ತದೆ ಎಂದು ಸಚಿವ ಅನಂತಕುಮಾರ ಹೆಗಡೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರು.

ಕಾಂಗ್ರೆಸ್ ಪುಕ್ಕಲು ಪಕ್ಷ, ಬಿಜೆಪಿ ಹುಲಿ ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೆಗಡೆ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಈ ರೀತಿ ಉತ್ತರಿಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಮಧ್ಯೆ ಹೊಂದಾಣಿಕೆ ಇಲ್ಲ. ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆ ಬಗ್ಗೆ ಗೊತ್ತಿಲ್ಲ. ಅದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದರು.

ಬಜೆಟ್‌ನಲ್ಲಿ ಯಾರಿಗೂ ಅನ್ಯಾಯ ಆಗಿಲ್ಲ. ಸಿದ್ದರಾಮಯ್ಯ ಅವರ ಬಜೆಟ್‌ನೊಂದಿಗೆ ಸೇರಿಸಿ ಈಗಿನ ಬಜೆಟ್ ನೋಡಬೇಕು. ನಗರ ಸ್ಥಳೀಯ ಸಂಸ್ಥೆಗಳಿಗೆ ವಿವಿಧ ಮೂಲಗಳಿಂದ ಅನುದಾನ ಬರತ್ತೆ. ಹಾಗಾಗಿ ಪೌರಾಡಳಿತ ಇಲಾಖೆಗೆ ಬಜೆಟ್ ಅನುದಾನ ಮುಖ್ಯವಲ್ಲ ಎಂದರು.

ಪ್ರತ್ಯೇಕ ರಾಜ್ಯ ಚರ್ಚೆ ಈಗ ಅಗತ್ಯವಿಲ್ಲ. ಎಚ್.ಕೆ. ಪಾಟೀಲ್ ಅವರ ಪತ್ರದಲ್ಲೇನಿದೆ ಗೊತ್ತಿಲ್ಲ ಎಂದರು. ಬೆಳಗಾವಿಯಲ್ಲಿ ಸ್ಥಾಪಿಸಿರುವ ಎತ್ತರದ ರಾಷ್ಟ್ರಧ್ವಜ ಸರಿಯಾಗಿ ನಿರ್ವಹಣೆ ಆಗದೆ ಇರುವ ಬಗ್ಗೆ ಕೇಳಿದ ಪ್ರಶ್ನೆಗೆ ತಮಗೆ ಆ ಕುರಿತು ಮಾಹಿತಿಯೇ ಇಲ್ಲ ಎಂದರು.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಡೆದ ಯುಜಿಡಿ, ಕುಡಿಯುವ ನೀರಿನ ಕಾಮಗಾರಿಗಳ ಬಗ್ಗೆ ಸಾಕಷ್ಟು ದೂರುಗಳಿವೆ. ಜತೆಗೆ ಸ್ಟಾರ್ ರೇಟಿಂಗ್ ಹೆಚ್ಚಿಸಿಕೊಳ್ಳುವ ಸಲುವಾಗಿ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಕಾರ್ಯಾಗಾರ ನಡೆಸಲಾಗುತ್ತಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ