ಆ್ಯಪ್ನಗರ

ಬಿಜೆಪಿ ಸಂಸದರಿಗೆ ರಮೇಶ್‌ ಜಾರಕಿಹೊಳಿ ಅಭಿನಂದನೆ

ಬೆಳಗಾವಿ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಗೆದ್ದಿರುವ ...

Vijaya Karnataka 26 May 2019, 5:00 am
ಬೆಳಗಾವಿ : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಗೆದ್ದಿರುವ ಬಿಜೆಪಿಯ ಡಾ. ಉಮೇಶ ಜಾಧವ್‌ ಅವರಿಗೆ ಶಾಸಕ ರಮೇಶ್‌ ಜಾರಕಿಹೊಳಿ ಅಭಿನಂದನೆ ಸಲ್ಲಿಸುತ್ತಿರುವ ಫೋಟೊ ಜಿಲ್ಲೆಯಲ್ಲಿ ಸಂಚಲನ ಸೃಷ್ಟಿಸಿದೆ.
Vijaya Karnataka Web BLG-2505-2-52-25PRAMOD6


ಬೆಂಗಳೂರಿನಲ್ಲಿ ಬಿಜೆಪಿ ಮುಖಂಡರ ಜತೆಗೆ ರಮೇಶ್‌ ಜಾರಕಿಹೊಳಿ ಕೂಡ ಪುಷ್ಪಗುಚ್ಛ ಸಲ್ಲಿಸುತ್ತಿರುವುದು ಫೋಟೊದಲ್ಲಿದೆ. ರಮೇಶ್‌ ಜಾರಕಿಹೊಳಿ ಅವರು ಲೋಕಸಭೆ ಚುನಾವಣೆಯಲ್ಲಿಯೇ ಬಿಜೆಪಿ ಪರ ಬಹಿರಂಗವಾಗಿ ಕೆಲಸ ಮಾಡಿದ್ದರು. ಈಗ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದ ಅಭ್ಯರ್ಥಿಯನ್ನೇ ಬಹಿರಂಗವಾಗಿ ಅಭಿನಂದಿಸಿರುವುದು ಕಾಂಗ್ರೆಸ್‌ನಲ್ಲಿ ತಳಮಳ ಸೃಷ್ಟಿಸಿದೆ. ಇದರೊಂದಿಗೆ ರಮೇಶ್‌ ಜಾರಕಿಹೊಳಿ ಬಿಜೆಪಿ ಸೇರುತ್ತಾರೆ ಎನ್ನುವ ಮಾತು ಗಟ್ಟಿಯಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ