ಆ್ಯಪ್ನಗರ

ಸಚಿವ ಸ್ಥಾನಕ್ಕೆ ರಮೇಶ್‌ ರಾಜೀನಾಮೆ ನೀಡುವುದಿಲ್ಲ

ಚಿಕ್ಕೋಡಿ: ರಮೇಶ ಜಾರಕಿಹೊಳಿ ಅವರು ಯಾವುದೇ ಕಾರಣಕ್ಕೂ ಸಚಿವ ಸ್ಥಾನಕ್ಕೆ ...

Vijaya Karnataka 25 Feb 2020, 5:00 am
ಚಿಕ್ಕೋಡಿ: ರಮೇಶ ಜಾರಕಿಹೊಳಿ ಅವರು ಯಾವುದೇ ಕಾರಣಕ್ಕೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲಎಂದು ರಾಯಬಾಗದ ಶಾಸಕ ದುರ್ಯೋದನ ಐಹೊಳೆ ಹೇಳಿದರು.
Vijaya Karnataka Web 24CKD6_53
ಚಿಕ್ಕೋಡಿ ತಾಲೂಕಿನ ತೋರಣಹಳ್ಳಿ ಗ್ರಾಮದಲ್ಲಿಶಾಸಕ ದುರ್ಯೋಧನ ಐಹೊಳೆ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು.


ತಾಲೂಕಿನ ತೋರಣಹಳ್ಳಿ, ಜೈನಾಪುರ, ಮಾಂಗನೂರ ಗ್ರಾಮದಲ್ಲಿ1 ಕೋಟಿ ರೂ.ಗಳ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಬೆಳಗಾವಿ ಜಿಲ್ಲೆಯಲ್ಲಿನನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳ ಅನುಷ್ಠಾನಕ್ಕಾಗಿ ರಮೇಶ್‌ ಜಾರಕಿಹೊಳಿ ಅವರು ಜಲಸಂಪನ್ಮೂಲ ಖಾತೆ ಪಡೆದುಕೊಂಡಿದ್ದಾರೆ. ಹೀಗಾಗಿ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಬರುವುದಿಲ್ಲ. ಶಾಸಕ ಮಹೇಶ ಕುಮಠಳ್ಳಿ ಅವರಿಗೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಉನ್ನತ ಸ್ಥಾನ ನೀಡಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಜಿಪಂ ಸದಸ್ಯೆ ಲಕ್ಷ್ಮೀ ನಿಂಗಪ್ಪಾ ಕುರಬರ, ವಿಜಯ ಕೋಠಿವಾಲೆ, ಬಸವರಾಜ ಮಾಳಗೆ, ರಾಯಗೊಂಡ ಕೆಳಗಿನಮನಿ, ರವಿ ಹಿರೇಖೋಡಿ, ವಾಸುದೇವ ಕುಲಕರ್ಣಿ, ಅಣ್ಣಾಸಾಹೇಬ ಖೇಮಲಾಪುರೆ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ