ಆ್ಯಪ್ನಗರ

ಅತ್ಯಾಚಾರ, ಕೊಲೆ ಆರೋಪ ಸಾಬೀತು

ಬೆಳಗಾವಿ: ಜನತಾ ಮನೆ ಕೊಡಿಸುವುದಾಗಿ ನಂಬಿಸಿ ಅತ್ಯಾಚಾರ ಮಾಡಿ ಕೊಲೆಗೈದ ಆರೋಪ ಸಾಬೀತಾದ ...

Vijaya Karnataka 3 Jul 2019, 5:00 am
ಬೆಳಗಾವಿ: ಜನತಾ ಮನೆ ಕೊಡಿಸುವುದಾಗಿ ನಂಬಿಸಿ ಅತ್ಯಾಚಾರ ಮಾಡಿ ಕೊಲೆಗೈದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಅಪರಾಧಿ ಎಂದು ಘೋಷಿಸಿ ಇಲ್ಲಿನ 8ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಚಿಕ್ಕೋಡಿ ತಾಲೂಕಿನ ಖಡಕಲಾಟ ಗ್ರಾಮದ ರಮೇಶ್‌ ಅಲಿಯಾಸ್‌ ರಾಮಾ ಲಕ್ಷ್ಮಣ ಜಾಧವ (31) ಶಿಕ್ಷೆಗೆ ಗುರಿಯಾದ ಅಪರಾಧಿ.
Vijaya Karnataka Web rape and murder charge proved
ಅತ್ಯಾಚಾರ, ಕೊಲೆ ಆರೋಪ ಸಾಬೀತು


ವಿಧವೆಯೊಂದಿಗೆ ಸ್ನೇಹ ಬೆಳೆಸಿದ್ದ ರಾಮಾ ಜಾಧವ 'ಜನತಾ ಮನೆ ಕೊಡಿಸುತ್ತೇನೆ. ಅದಕ್ಕಾಗಿ ಫೋಟೋ ತೆಗೆಸಬೇಕು' ಎಂದು 2016ರ ಅ.21 ರಂದು ಆಕೆಯನ್ನು ಕರೆದುಕೊಂಡ ಹೋಗಿ ಅತ್ಯಾಚಾರ ನಡೆಸಿದ್ದ. ಅತ್ಯಾಚಾರ ವಿಷಯವನ್ನು ಬಹಿರಂಗ ಪಡಿಸುವುದಾಗಿ ಹೇಳಿದ ಮಹಿಳೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದ. ಈ ಕುರಿತು ಮೃತಳ ಸಹೋದರ ನಿಪ್ಪಾಣಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಿಪ್ಪಾಣಿ ಪೊಲೀಸ್‌ ಠಾಣೆಯ ತನಿಖಾಧಿಕಾರಿ ಕಿಶೋರ ಭರಣಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ವಿ.ಬಿ.ಸೂರ‍್ಯವಂಶಿ, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಮಾಣವನ್ನು ಕಾಯ್ದಿರಿಸಿ ಮಂಗಳವಾರ ತೀರ್ಪು ಪ್ರಕಟಿಸಿದ್ದಾರೆ. ಸರಕಾರದ ಪರವಾಗಿ ಅಭಿಯೋಜಕ ಕಿರಣ್‌ ಪಾಟೀಲ ವಕಾಲತ್ತು ನಡೆಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ