ಆ್ಯಪ್ನಗರ

ಅತ್ಯಾಚಾರ ಆರೋಪ ಸಾಬೀತು: ಇಂದು ಶಿಕ್ಷೆ ಪ್ರಕಟ

ಬೆಳಗಾವಿ: ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಮೂಲದ ವ್ಯಕ್ತಿಯನ್ನು ಅಪರಾಧಿ ಎಂದು ಘೋಷಿಸಿ ಶಿಕ್ಷೆ ಪ್ರಮಾಣ ...

Vijaya Karnataka 21 Jul 2019, 5:00 am
ಬೆಳಗಾವಿ : ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಮೂಲದ ವ್ಯಕ್ತಿಯನ್ನು ಅಪರಾಧಿ ಎಂದು ಘೋಷಿಸಿ ಶಿಕ್ಷೆ ಪ್ರಮಾಣ ಕಾಯ್ದಿರಿಸಿ ಶನಿವಾರ ಇಲ್ಲಿನ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
Vijaya Karnataka Web rape case proved pronouncement of punishment today
ಅತ್ಯಾಚಾರ ಆರೋಪ ಸಾಬೀತು: ಇಂದು ಶಿಕ್ಷೆ ಪ್ರಕಟ


ಉತ್ತರಪ್ರದೇಶ ರಾಜ್ಯದ ಮುರಾರಪುರ ಗ್ರಾಮದ ಅಪ್ಸರ್‌ಅಲಿ ಅಸ್ಗರಲಿ ಶಿಕ್ಷೆಗೆ ಒಳಗಾದ ಅಪರಾಧಿ. ಬಾಲಕಿಯ ಮನೆ ಮುಂದೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಅಪ್ಸರ್‌ಅಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬಾಲಕಿ ಮನೆಗೆ ತೆರಳಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ್ದ. ನಂತರ ಬಾಲಕಿಯನ್ನು ಬೇರೆ ಊರುಗಳಿಗೆ ಕರೆದುಕೊಂಡು ಹೋಗಿ ಅಲ್ಲಿಯೂ ಅತ್ಯಾಚಾರ ನಡೆಸಿದ್ದರಿಂದ ಬಾಲಕಿ ಗರ್ಭಿಣಿಯಾಗಿದ್ದಳು. ಈ ಕುರಿತು 2016ರ ಮಾ.23 ರಂದು ಸಂತ್ರಸ್ತ ಬಾಲಕಿಯ ತಾಯಿ ಸವದತ್ತಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಅಂದಿನ ತನಿಖಾಧಿಕಾರಿ ಬಿ.ಎಸ್‌. ಮಂಟೂರ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಿ.ನಂಜುಂಡಯ್ಯ ಜು.22ರಂದು ಅಪರಾಧಿಯ ಶಿಕ್ಷೆ ಪ್ರಮಾಣ ಘೋಷಣೆ ಕಾಯ್ದಿರಿಸಿ ಶನಿವಾರ ತೀರ್ಪು ಪ್ರಕಟಿಸಿದ್ದಾರೆ. ಸರಕಾರದ ಪರವಾಗಿ ಅಭಿಯೋಜಕ ಎಲ್‌.ವಿ.ಪಾಟೀಲ ವಕಲಾತ್ತು ವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ