ಆ್ಯಪ್ನಗರ

ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಲು ರೆಡಿ: ಸಂಸದ ಪ್ರಕಾಶ್‌ ಹುಕ್ಕೇರಿ

ಬೆಳಗಾವಿ: ಕಾಂಗ್ರೆಸ್‌ ಶಾಸಕರು ಸಹಕಾರ ...

Vijaya Karnataka 26 Feb 2019, 5:00 am
ಬೆಳಗಾವಿ : ಕಾಂಗ್ರೆಸ್‌ ಶಾಸಕರು ಸಹಕಾರ ನೀಡಿದರೆ ಬೆಳಗಾವಿ ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧಿಸಲು ರೆಡಿ ಎಂದು ಚಿಕ್ಕೋಡಿ ಸಂಸದ ಪ್ರಕಾಶ್‌ ಹುಕ್ಕೇರಿ ಹೊಸ ಬಾಂಬ್‌ ಸಿಡಿಸಿದ್ದು, ಪಕ್ಷದ ಟಿಕೆಟ್‌ ಆಕಾಂಕ್ಷಿಗಳು ಮತ್ತು ಬಿಜೆಪಿಯ ಹಾಲಿ ಸಂಸದ ಸುರೇಶ ಅಂಗಡಿ ಅವರಿಗೆ ಶಾಕ್‌ ನೀಡಿದ್ದಾರೆ.
Vijaya Karnataka Web ready to contest in belgaum lok sabha constituency mp prakash hukkeri
ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಲು ರೆಡಿ: ಸಂಸದ ಪ್ರಕಾಶ್‌ ಹುಕ್ಕೇರಿ


ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ''ಚಿಕ್ಕೋಡಿಯಿಂದ ಸ್ಪರ್ಧಿಸಿ ಗೆಲ್ಲುವ ವಿಶ್ವಾಸದಂತೆ ಬೆಳಗಾವಿಯಿಂದಲೂ ಸ್ಪರ್ಧಿಸಿ ಗೆಲ್ಲುವ ಆತ್ಮವಿಶ್ವಾಸ ನನಗಿದೆ. ಬೆಳಗಾವಿಯಿಂದ ಸ್ಪರ್ಧಿಸಲು ನಾನೂ ಟಿಕೆಟ್‌ ಕೇಳುತ್ತೇನೆ. ಪಕ್ಷದ ಶಾಸಕರು ಸಹಕರಿಸಿದರೆ ಬೆಳಗಾವಿಯಲ್ಲಿ ಕಾಂಗ್ರೆಸ್‌ ಬಾವುಟ ಹಾರಿಸುವುದರಲ್ಲಿ ಎರಡು ಮಾತಿಲ್ಲ'', ಎಂದರು.

''ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ನಗರದ ಎರಡೂ ಕ್ಷೇತ್ರ ಮತ್ತು ಗ್ರಾಮೀಣ ಭಾಗದಲ್ಲಿ ಹೆಚ್ಚು ವೋಟು ಬಂದಿದ್ದು ಸುರೇಶ ಅಂಗಡಿ ಗೆಲುವಿಗೆ ಕಾರಣವಾಗಿತ್ತು. ಆದರೆ, ಬೆಳಗಾವಿ ಜನ ಮತ್ತು ಇಲ್ಲಿನ ನಾಯಕರ ಜತೆಗೆ ನಾನೂ ಉತ್ತಮ ಸಂಬಂಧ ಹೊಂದಿದ್ದೇನೆ. ಮಹಾರಾಷ್ಟ್ರದ ನಾಯಕರ ಜತೆಗೂ ಉತ್ತಮ ಸಲುಗೆ ಹೊಂದಿರುವುದರಿಂದ ಮರಾಠಿ ಭಾಷಿಕರ ಮನವೊಲಿಸಿ ಬೆಳಗಾವಿ ಭಾಗದಲ್ಲಿ ನಿರೀಕ್ಷೆಗೂ ಮೀರಿ ವೋಟು ಗಳಿಸಲು ಸಾಧ್ಯವಿದೆ'', ಎಂದು ಸಂಸದ ಹುಕ್ಕೇರಿ ಅಭಿಪ್ರಾಯಪಟ್ಟರು.

''ಎಲ್ಲಕ್ಕಿಂತ ಹೆಚ್ಚಾಗಿ ಬೆಳಗಾವಿ ಕ್ಷೇತ್ರದಲ್ಲಿ ಅಭಿವೃದ್ಧಿಯ ಅವಶ್ಯಕತೆ ಹೆಚ್ಚಿದೆ. ಚಿಕ್ಕೋಡಿ ಕ್ಷೇತ್ರದಲ್ಲಿ ಕೇವಲ ಐದು ವರ್ಷಗಳಲ್ಲಿ ಮೂರು ಕೇಂದ್ರೀಯ ವಿದ್ಯಾಲಯ, ಪಾಸ್‌ಪೋರ್ಟ್‌ ಕೇಂದ್ರ ಸೇರಿದಂತೆ ಸಾವಿರಾರು ಕೋಟಿ ರೂ.ಅನುದಾನ ತಂದು ಕೆಲಸ ಮಾಡಿದ್ದೇನೆ. ಅನುಭವ ಮತ್ತು ಕೆಲಸ ತರುವ ಸಾಮರ್ಥ್ಯ‌ ಎರಡೂ ಇರುವುದರಿಂದ ಈ ಬಾರಿ ನಾನೂ ಬೆಳಗಾವಿಯಿಂದ ಟಿಕೆಟ್‌ ಕೇಳುತ್ತೇನೆ'', ಎನ್ನುತ್ತಾ ಪ್ರಕಾಶ್‌ ಹುಕ್ಕೇರಿ ಹಲ್‌ಚಲ್‌ ಮೂಡಿಸಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸ್ಥಳೀಯವಾಗಿಯೇ ಸಾಕಷ್ಟು ಅಭ್ಯರ್ಥಿಗಳಿದ್ದಾರೆ. ಪ್ರಕಾಶ್‌ ಹುಕ್ಕೇರಿ ಕೂಡ ಮನಸ್ಸು ಮಾಡಿರುವುದರಿಂದ ಬೆಳಗಾವಿಯಿಂದ ಸ್ಪರ್ಧಿಸುವ ಇರಾದೆ ನನಗಿಲ್ಲ. ಬೆಳಗಾವಿಯಿಂದ ಸ್ಪರ್ಧಿಸುವಂತೆ ಯಾರೂ ಆಹ್ವಾನ ನೀಡಿಲ್ಲ.
- ಆರ್‌.ವಿ.ದೇಶಪಾಂಡೆ. ಕಂದಾಯ ಸಚಿವ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ