ಆ್ಯಪ್ನಗರ

ಗಾಂಧಿ ಹತ್ಯೆ ಮರುಸೃಷ್ಟಿ ಖಂಡಿಸಿ ಪ್ರತಿಭಟನೆ

ಬೆಳಗಾವಿ : ಮಹಾತ್ಮ ಗಾಂಧೀಜಿ ಅವರ ಹತ್ಯೆಯ ಘಟನೆ ಮರು ಸೃಷ್ಟಿಸಿ ಸಂಭ್ರಮಿಸಿದವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಶನಿವಾರ ಸೊಷಿಯಲ್‌ ಡೆಮಾಕ್ರಟಿಕ್‌ ...

Vijaya Karnataka 3 Feb 2019, 5:00 am
ಬೆಳಗಾವಿ : ಮಹಾತ್ಮ ಗಾಂಧೀಜಿ ಅವರ ಹತ್ಯೆಯ ಘಟನೆ ಮರು ಸೃಷ್ಟಿಸಿ ಸಂಭ್ರಮಿಸಿದವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಶನಿವಾರ ಸೊಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ ಸಂಘಟನೆ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
Vijaya Karnataka Web BEL-2 LBS 3


ಮಹಾತ್ಮ ಗಾಂಧೀಜಿಯವರ ಹತ್ಯೆ ನಡೆದ ಜ.30ರಂದು ದೇಶದಲ್ಲಿ ಸ್ಮರಣೆ ಮಾಡುತ್ತಿರುವ ಸಂದರ್ಭದಲ್ಲಿ, ದೇಶಕ್ಕೆ ಅವಮಾನಿಸುವ ರೀತಿಯಲ್ಲಿ ಘಟನೆಯೊಂದು ನಡೆದಿದೆ. ಜತೆಗೆ ಗಾಂಧೀಜಿ ಹತ್ಯೆಗೈದ ಗೋಡ್ಸೆ ಪ್ರತಿಕೃತಿಗೆ ಮಾಲಾರ್ಪಣೆ ಮಾಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ದೇಶವೇ ತಲೆತಗ್ಗಿಸುವ ಕೆಲಸ ಮಾಡಿರುವವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಮನವಿ ಮೂಲಕ ಆಗ್ರಹಿಸಿದರು.

ದೇಶದಲ್ಲಿ ಅಶಾಂತಿ ಉಂಟು ಮಾಡುವ ಪ್ರಯತ್ನ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು. ಇನ್ನೂ ಮುಂದೆ ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮೂಲಕ ಒತ್ತಾಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ