ಆ್ಯಪ್ನಗರ

ಬೆಳಗಾವಿಯಲ್ಲಿ ಮಹಿಳಾ ಸೈನಿಕರ ನೇಮಕಾತಿ ರಾರ‍ಯಲಿ

ಬೆಳಗಾವಿ : ಇಲ್ಲಿನ ಮರಾಠಾ ಲಘು ಪದಾತಿ ದಳ ಕೇಂದ್ರ ...

Vijaya Karnataka 10 Jul 2019, 5:00 am
ಬೆಳಗಾವಿ : ಇಲ್ಲಿನ ಮರಾಠಾ ಲಘು ಪದಾತಿ ದಳ ಕೇಂದ್ರ (ಎಂಎಲ್‌ಐಆರ್‌ಸಿ)ದ ಆವರಣದಲ್ಲಿನ ಶಿವಾಜಿ ಕ್ರೀಡಾಂಗಣದಲ್ಲಿ ಜು.22 ರಿಂದ 27ರ ವರೆಗೆ ದೇಶದಲ್ಲಿಯೇ ಪ್ರಥಮ ಬಾರಿಗೆ ಮಹಿಳಾ ಸೈನಿಕರ ನೇಮಕಾತಿ ರಾರ‍ಯಲಿ ಆಯೋಜಿಸಲಾಗಿದೆ.
Vijaya Karnataka Web BEL-9 LBS 6


ದೇಶಾದ್ಯಂತ ಒಟ್ಟು ಐದು ಕಡೆಗಳಲ್ಲಿ ಈ ರಾರ‍ಯಲಿ ನಡೆಸಲಾಗುತ್ತಿದ್ದು, ಅವುಗಳಲ್ಲಿ ಬೆಳಗಾವಿಯನ್ನೂ ಒಂದು ಕೇಂದ್ರವಾಗಿ ಆಯ್ಕೆ ಮಾಡಲಾಗಿದೆ. ಸುಮಾರು ನಾಲ್ಕು ಸಾವಿರ ಅಭ್ಯರ್ಥಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಪೂರ್ವಭಾವಿ ಸಭೆ: ರಾರ‍ಯಲಿ ಹಿನ್ನೆಲೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಜಿಲ್ಲಾಧಿಕಾರಿ ಡಾ.ಎಸ್‌.ಬಿ. ಬೊಮ್ಮನಹಳ್ಳಿ ಅಧ್ಯಕ್ಷತೆಯಲ್ಲಿ ಮಂಗಳವಾರ ಪೂರ್ವಭಾವಿ ಸಭೆ ನಡೆಯಿತು.

''ಅಭ್ಯರ್ಥಿಗಳು ಸಲ್ಲಿಸುವ ಜಾತಿ ಮತ್ತು ಶೈಕ್ಷ ಣಿಕ ಪ್ರಮಾಣ ಪತ್ರಗಳನ್ನು ತಾತ್ಕಾಲಿಕವಾಗಿ ಪರಿಶೀಲಿಸಿ ನೇಮಕಾತಿ ಪ್ರಾಧಿಕಾರದ ಜತೆ ಸಮನ್ವಯ ಸಾಧಿಸಲು ಕಂದಾಯ ಮತ್ತು ಶೈಕ್ಷ ಣಿಕ ಇಲಾಖೆಯ ಸಿಬ್ಬಂದಿ ನಿಯೋಜಿಸಬೇಕು. ರಾರ‍ಯಲಿಯಲ್ಲಿ ಭಾಗವಹಿಸಲಿರುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಬಸ್‌ ಹಾಗೂ ರೈಲು ನಿಲ್ದಾಣದಲ್ಲಿ ಸಹಾಯ ಕೇಂದ್ರ ಸ್ಥಾಪಿಸಲಾಗುವುದು. ಸೂಕ್ತ ಸಾರಿಗೆ, ಕುಡಿಯುವ ನೀರು, ವೈದ್ಯಕೀಯ ಸೌಲಭ್ಯ ಹಾಗೂ ವಿದ್ಯುತ್‌ ಸಂಪರ್ಕವನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಒದಗಿಸಬೇಕು'' ಎಂದು ಜಿಲ್ಲಾಧಿಕಾರಿ ಆದೇಶಿಸಿದರು.

ಜಿಲ್ಲಾ ವೈದ್ಯಾಧಿಕಾರಿ ಡಾ. ಎಸ್‌.ವಿ.ಮುನ್ಯಾಳ, ''ಎರಡು ಆ್ಯಂಬುಲೆನ್ಸ್‌, ವೈದ್ಯರು, ವೈದ್ಯಕೀಯ ಸಿಬ್ಬಂದಿ, ತಪಾಸಣಾ ಯಂತ್ರೋಪಕರಣಗಳು ಹಾಗೂ ಅಗತ್ಯ ಔಷಧಿಗಳನ್ನು ಆರೋಗ್ಯ ಇಲಾಖೆ ವತಿಯಿಂದ ಒದಗಿಸಲಾಗುವುದು'' ಎಂದು ವಿವರಿಸಿದರು.

ಅಪರ ಜಿಲ್ಲಾಧಿಕಾರಿ ಡಾ. ಎಚ್‌.ಬಿ. ಬೂದೆಪ್ಪ, ಸೇನಾ ನೇಮಕಾತಿ ಅಧಿಕಾರಿ ಕರ್ನಲ್‌ ಪ್ರಣೀತ್‌ ದಯಾಳ್‌, ಸ್ಟೇಷನ್‌ ಕಮಾಂಡರ್‌ ಬಿ.ಎಸ್‌. ಘಿವಾರಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕ ಈಶ್ವರ ಕುಡೊಳ್ಳಿ ಉಪಸ್ಥಿತರಿದ್ದರು.

ರಾರ‍ಯಲಿ ವೇಳೆ ನೂಕುನುಗ್ಗಲು ಉಂಟಾಗದಂತೆ ನೋಡಿಕೊಳ್ಳಲು ಸ್ಥಳೀಯ ಪೊಲೀಸ್‌ ಸಿಬ್ಬಂದಿ ನೇಮಿಸಬೇಕು. ಅಭ್ಯರ್ಥಿಗಳಿಗೆ ಪಾವತಿ ಆಧಾರದ ಮೇಲೆ ಉಪಾಹಾರ ಒದಗಿಸುವುದು ಸೇರಿದಂತೆ ನೇಮಕಾತಿ ಪ್ರಕ್ರಿಯೆ ಸುಸೂತ್ರವಾಗಿ ನಡೆಸಲು ಎಲ್ಲ ಕ್ರಮ ಕೈಗೊಳ್ಳಬೇಕು.
-ಡಾ.ಎಸ್‌.ಬಿ.ಬೊಮ್ಮನಹಳ್ಳಿ, ಜಿಲ್ಲಾಧಿಕಾರಿ.

4 ಸಾವಿರ ಅಭ್ಯರ್ಥಿಗಳ ನಿರೀಕ್ಷೆ :
ದೇಶದಲ್ಲಿ ಪ್ರಥಮ ಬಾರಿ ಮಹಿಳಾ ಸೈನಿಕರ ಭರ್ತಿ ರಾರ‍ಯಲಿ ನಡೆಯುತ್ತಿದ್ದು, ಕರ್ನಾಟಕದ ಬೆಳಗಾವಿ, ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ರಾರ‍ಯಲಿ ನಡೆಯಲಿದೆ. ನಾಲ್ಕು ಸಾವಿರ ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ಸೇನಾಧಿಕಾರಿಗಳು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ