ಆ್ಯಪ್ನಗರ

ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಬೇಕು, ಕೆಳಮಟ್ಟದಿಂದ ಪಕ್ಷ ಬೆಳೆಸುವ ಕೆಲಸ ಈ ವಯಸ್ಸಿನಲ್ಲಿ ಮಾಡಬೇಕಾಗಿದೆ: ದೇವೇಗೌಡ

ಐಟಿ ರೆಡ್ ಮಾಡಿ ಕೊಡಬಾರದ ಕಷ್ಟ ಕೊಟ್ಟಿದ್ದಾರೆ. ನನ್ನ ಆಡಳಿತ ಅವಧಿಯಲ್ಲಿ ಎಲ್ಲ ಕಡೆ ನೀರಾವರಿ ಸೌಲಭ್ಯ ಒದಗಿಸಿದ್ದೇನೆ. ಒಂದು ಕಾಲದಲ್ಲಿ18 ವಿಧಾನಸಭಾ ಕ್ಷೇತ್ರಗಳಲ್ಲಿ 14 ಕ್ಷೇತ್ರಗಳನ್ನು ಗೆದ್ದಿದ್ದೇವೆ. ಗುಜರಾತ್ ರಾಜ್ಯ ಆಳುವ ಸಂದರ್ಭದಲ್ಲಿ ಮೋದಿಯವರನ್ನು ಪ್ರಶ್ನಿಸುವ ಅಧಿಕಾರ ಯಾರಿಗೂ ಇರಲಿಲ್ಲ.

Vijaya Karnataka Web 19 Feb 2020, 5:06 pm
ಬೆಳಗಾವಿ: ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಮುಖ್ಯವಾಗಿದೆ. ನಾನು ಸೋಲನ್ನು ಸವಾಲಾಗಿ ಸ್ವೀಕರಿಸಿದ್ದೇನೆ. ಪಕ್ಷ ಬಲಪಡಿಸಲು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತೇನೆ. ಪಕ್ಷವನ್ನು ಕೆಳಮಟ್ಟದಿಂದ ಬೆಳೆಸುವ ಕೆಲಸ ಈ ವಯಸ್ಸಿನಲ್ಲಿ ಮಾಡಬೇಕಿದೆ ಎಂದು ಜೆಡಿಎಸ್ ರಾಷ್ಟ್ರಾಧ್ಯಕ್ಷ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದರು.
Vijaya Karnataka Web ಎಚ್‌ಡಿ ದೇವೇಗೌಡ
ಎಚ್‌ಡಿ ದೇವೇಗೌಡ


ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ದೇವೇಗೌಡ ಮಾತನಾಡಿದರು.

ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿಯವರೇ ಮುಂದುವರಿಯುತ್ತಾರೆ. ಕೋರ್‌ಕಮಿಟಿ ಸಭೆ ಮಾಡಿ ಪಕ್ಷದ ಪದಾಧಿಕಾರಿಗಳನ್ನು ಆಯ್ಕೆ ಮಾಡುತ್ತೇವೆ. ಯಾರ ಬಗ್ಗೆಯೂ ಲಘುವಾಗಿ ಮಾತನಾಡುವುದಿಲ್ಲ ಎಂದರು.

ಐಟಿ ರೆಡ್ ಮಾಡಿ ಕೊಡಬಾರದ ಕಷ್ಟ ಕೊಟ್ಟಿದ್ದಾರೆ. ನನ್ನ ಆಡಳಿತ ಅವಧಿಯಲ್ಲಿ ಎಲ್ಲ ಕಡೆ ನೀರಾವರಿ ಸೌಲಭ್ಯ ಒದಗಿಸಿದ್ದೇನೆ. ಒಂದು ಕಾಲದಲ್ಲಿ18 ವಿಧಾನಸಭಾ ಕ್ಷೇತ್ರಗಳಲ್ಲಿ 14 ಕ್ಷೇತ್ರಗಳನ್ನು ಗೆದ್ದಿದ್ದೇವೆ. ಗುಜರಾತ್ ರಾಜ್ಯ ಆಳುವ ಸಂದರ್ಭದಲ್ಲಿ ಮೋದಿಯವರನ್ನು ಪ್ರಶ್ನಿಸುವ ಅಧಿಕಾರ ಯಾರಿಗೂ ಇರಲಿಲ್ಲ ಎಂದರು.

ಹೊಸದಿಲ್ಲಿಯಲ್ಲಿ ಚುನಾವಣೆಯ ಫಲಿತಾಂಶ ಬಿಜೆಪಿ ಹಾಗೂ ಕಾಂಗ್ರೆಸ್‌ಗೆ ಭಾರಿ ಪೆಟ್ಟು ಕೊಟ್ಟಿದೆ. ಜನರು ಪ್ರಾದೇಶಿಕ ಪಕ್ಷಗಳತ್ತ ಒಲವು ತೋರಿಸಿದ್ದಾರೆ. ಸದ್ಯ ನಡೆಯುತ್ತಿರುವ ವಿಧಾನಸಬೆ ಅಧಿವೇಶನದಲ್ಲಿ ಅಭಿವೃದ್ಧಿ ಪರ ಚರ್ಚೆ ನಡೆಯಲಿ ಎಂದು ಹೇಳಿದರು.

ದೇವೇಗೌಡರನ್ನು ಸೋಲಿಸುವ ಹುನ್ನಾರವನ್ನು ಸಿದ್ದರಾಮಯ್ಯ ಮಾಡಿದ್ದಾರೆ. ಕಾಂಗ್ರೆಸ್‌, ಜೆಡಿಎಸ್‌ ಸಮ್ಮಿಶ್ರ ಸರಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣ ಎಂದು ಎಚ್‌ಡಿ ದೇವೇಗೌಡ ಆರೋಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ