ಆ್ಯಪ್ನಗರ

ನೂತನ ಮೋಟಾರ್‌ ವಾಹನ ಕಾಯ್ದೆ ರದ್ದತಿಗೆ ಆಗ್ರಹ

ಬೆಳಗಾವಿ: ನೂತನ ಮೋಟಾರ್‌ ವಾಹನ ಕಾಯ್ದೆ ರದ್ದುಪಡಿಸಬೇಕು ...

Vijaya Karnataka 21 Sep 2019, 5:00 am
ಬೆಳಗಾವಿ: ನೂತನ ಮೋಟಾರ್‌ ವಾಹನ ಕಾಯ್ದೆ ರದ್ದುಪಡಿಸಬೇಕು ಎಂದು ಒತ್ತಾಯಿಸಿ ಶುಕ್ರವಾರ ಬೆಳಗಾವಿ ವಕೀಲರ ಸಂಘದ ಸದಸ್ಯರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರಿಗೆ ಮನವಿ ರವಾನಿಸಿದರು.
Vijaya Karnataka Web 20 LBS 3_53


ಕೇಂದ್ರ ಸರಕಾರ ಜಾರಿಗೆ ತಂದಿರುವ ನೂತನ ಮೋಟಾರ್‌ ವಾಹನ ಕಾಯ್ದೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಜನಸಾಮಾನ್ಯರಿಗೆ ದಂಡ ಕಟ್ಟಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ವಾಹನ ಸವಾರರಿಗೆ ಕಿರಿಕಿರಿಯಾಗುತ್ತಿದೆ. ಸಾಮಾನ್ಯರು ಜೀವನ ಸಾಗಿಸುವುದು ಕಷ್ಟವಾಗುತ್ತಿದೆ. ಆದ್ದರಿಂದ ಕೂಡಲೇ ನೂತನ ಮೋಟಾರ್‌ ವಾಹನ ಕಾಯ್ದೆ ರದ್ದುಪಡಿಸಿ, ದಂಡವನ್ನು ಕಡಿಮೆಗೊಳಿಸಬೇಕು ಎಂದು ಒತ್ತಾಯಿಸಿದರು.

ವಕೀಲರಾದ ಗಜಾನನ ಪಾಟೀಲ, ಆರ್‌.ಸಿ. ಪಾಟೀಲ, ಕಲ್ಮೇಶ ಮಾಯನ್ನಾಚೆ, ಪ್ರಭಾಕರ ಪವಾರ, ರಮೇಶ ಗುಡೊಡಗಿ, ಸರಿತಾ ಶ್ರೇಯಕರ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ