ಆ್ಯಪ್ನಗರ

ಬಸ್‌ ನಿಲುಗಡೆಗೆ ಒತ್ತಾಯಿಸಿ ಮನವಿ

ಬೆಳಗಾವಿ: ನಗರದ ಕಣಬರ್ಗಿ ರಸ್ತೆಯ ಚಂದ್ರಮೌಳಿ ಕಾಲನಿ ಬಳಿ ಬಸ್‌ ನಿಲುಗಡೆ ಕಲ್ಪಿಸುವಂತೆ ಒತ್ತಾಯಿಸಿ ಸ್ಥಳೀಯರು ಬೆಳಗಾವಿ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿಗೆ ...

Vijaya Karnataka 14 May 2019, 5:00 am
ಬೆಳಗಾವಿ : ನಗರದ ಕಣಬರ್ಗಿ ರಸ್ತೆಯ ಚಂದ್ರಮೌಳಿ ಕಾಲನಿ ಬಳಿ ಬಸ್‌ ನಿಲುಗಡೆ ಕಲ್ಪಿಸುವಂತೆ ಒತ್ತಾಯಿಸಿ ಸ್ಥಳೀಯರು ಬೆಳಗಾವಿ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿಗೆ ಮನವಿ ಸಲ್ಲಿಸಿದರು.
Vijaya Karnataka Web request for bus stop
ಬಸ್‌ ನಿಲುಗಡೆಗೆ ಒತ್ತಾಯಿಸಿ ಮನವಿ


ಚಂದ್ರಮೌಳಿ ಕಾಲನಿಯಲ್ಲಿ 50-70 ಮನೆಗಳಿದ್ದು, ಸಾರಿಗೆ ಬಸ್‌ಗಳನ್ನು ನಿಲ್ಲಿಸುವುದರಿಂದ ಸ್ಥಳೀಯರಿಗೆ ಸಾಕಷ್ಟು ಅನುಕೂಲವಾಗುತ್ತದೆ. ಈ ಹಿಂದೆಯೂ ಸಾರಿಗೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಆಗ ಬಸ್‌ ನಿಲ್ಲಿಸುವಂತೆ ಅಧಿಕಾರಿಗಳು ಚಾಲಕರಿಗೆ ಸೂಚಿದ್ದರು. ಆದರೆ, ಚಾಲಕರು ಬಸ್‌ ನಿಲ್ಲಿಸುತ್ತಿಲ್ಲ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಎನ್‌.ಎಸ್‌. ಪಾಟೀಲ, ಬಿ.ಎ. ಪಾಟೀಲ, ಮಂಜುನಾಥ ವಸ್ತ್ರದ, ಎಸ್‌.ಆರ್‌. ಪಾಟೀಲ, ಬಾಪು ನಾವಲಗಟ್ಟಿ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ