ಆ್ಯಪ್ನಗರ

ಹಾರೂಗೇರಿಯಲ್ಲಿಕೃಷಿ ಇಲಾಖೆ ಸ್ಥಾಪಿಸಲು ಮನವಿ

ಹಾರೂಗೇರಿ: ಪಟ್ಟಣದಲ್ಲಿ ಕೃಷಿ ಇಲಾಖೆಯ ...

Vijaya Karnataka 12 Nov 2019, 5:00 am
ಹಾರೂಗೇರಿ : ಹಾರೂಗೇರಿ ಪಟ್ಟಣದಲ್ಲಿಕೃಷಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸ್ಥಾಪಿಸಬೇಕೆಂದು ಪ್ರಗತಿಪರ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಪ್ರಗತಿಪರ ರೈತರು ಸೋಮವಾರ ಸಾರಿಗೆ ಮತ್ತು ಕೃಷಿ ಸಚಿವ ಲಕ್ಷ್ಮಣ ಸವದಿ ಅವರಿಗೆ ಮನವಿ ಸಲ್ಲಿಸಿದರು.
Vijaya Karnataka Web 11ARAKERI-2_53
ಹಾರೂಗೇರಿ ಪಟ್ಟಣದಲ್ಲಿಕೃಷಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಸ್ಥಾಪಿಸಲು ಆಗ್ರಹಿಸಿ ಈರನಗೌಡ ಪಾಟೀಲ ಅವರು ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಮನವಿ ಸಲ್ಲಿಸಿದರು.


ಪ್ರಗತಿಪರ ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಧ್ಯಕ್ಷ ಈರನಗೌಡ ಪಾಟೀಲ ಮಾತನಾಡಿ, ಹಾರೂಗೇರಿ ಪಟ್ಟಣ ಗ್ರಾಮ ಪಂಚಾಯಿತಿಯಿಂದ ನೇರವಾಗಿ ಪುರಸಭೆಯಾಗಿ ಮೇಲ್ದರ್ಜೆಗೇರಿದ್ದು, ತಾಲೂಕಿನ ಕೃಷಿ ಉತ್ಪನ್ನಗಳ ಪ್ರಮುಖ ಕೇಂದ್ರವಾಗಿದೆ. ಪಟ್ಟಣದ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ರೈತರ ಆದಾಯದ ಮೂಲಕ ಕೃಷಿಯಾಗಿದೆ. ರೈತರಿಗೆ ಅನುಕೂಲವಾಗುವ ಎಲ್ಲಸೌಲಭ್ಯಗಳು ಹಾರೂಗೇರಿಯಲ್ಲಿರುವುದರಿಂದ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಸ್ಥಾಪಿಸಿ, ರೈತರ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡಬೇಕಿದೆ ಎಂದರು.

ಪ್ರಗತಿಪರ ರೈತ ಮುಖಂಡರಾದ ಅಣ್ಣಪ್ಪಗೌಡ ಪಾಟೀಲ, ಬಸನಗೌಡ ಆಸಂಗಿ, ರವಿಗೌಡ ಪಾಟೀಲ, ಬಸವರಾಜ ಅಥಣಿ ಮತ್ತಿತರ ರೈತರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ