ಆ್ಯಪ್ನಗರ

ಠೇವಣಿ ಹಣ ಮರಳಿಸುವಂತೆ ಗ್ರಾಹಕರಿಂದ ಮನವಿ

ಬೆಳಗಾವಿ : ಗೋಕಾದ ಜಗದ್ಗುರು ರೇಣುಕಾಚಾರ್ಯ ಮಹಿಳಾ ಪತ್ತಿನ ಸಹಕಾರಿ ಸಂಘದಿಂದ ಹಣ ಮರಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ...

Vijaya Karnataka 1 Nov 2018, 5:00 am
ಬೆಳಗಾವಿ : ಗೋಕಾದ ಜಗದ್ಗುರು ರೇಣುಕಾಚಾರ್ಯ ಮಹಿಳಾ ಪತ್ತಿನ ಸಹಕಾರಿ ಸಂಘದಿಂದ ಹಣ ಮರಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಗ್ರಾಹಕರು ಮನವಿ ಸಲ್ಲಿಸಿದರು.
Vijaya Karnataka Web BEL-31 LBS 2


ಮಹಿಳಾ ಪತ್ತಿನ ಸಹಕಾರಿ ಸಂಘ 2016-17ನೇ ಸಾಲಿನಲ್ಲಿ 9.51 ಲಕ್ಷ ರೂ. ಶೇರು ಬಂಡವಾಳ ಹೊಂದಿದೆ. 4.93 ಕೋಟಿ ರೂ. ಠೇವಣಿ, 50.06 ಲಕ್ಷ ರೂ. ನಿಧಿ, 5.73 ಕೋಟಿ ರೂ. ದುಡಿಯುವ ಬಂಡವಾಳ ಹಾಗೂ 9.44 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ. ಸಂಘದಲ್ಲಿ 975 ಶೇರುದಾರರು ಇದ್ದಾರೆ. ಆದರೆ, ಆಡಳಿತ ಮಂಡಳಿಯವರು ಸಂಘ ನಷ್ಟದಲ್ಲಿದೆ ಎಂಬುದಾಗಿ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದರು.

ಸಂಘದಲ್ಲಿ ಠೇವಣಿ ಇಟ್ಟಿರುವ ಗ್ರಾಹಕರಿಗೆ ಹಣ ಮರಳಿಸುತ್ತಿಲ್ಲ. ಕೇಳಿದರೆ ಸರಿಯಾದ ಸ್ಪಂದನೆ ಸಿಗುತ್ತಿಲ್ಲ. ಆದ್ದರಿಂದ ಜಿಲ್ಲಾಧಿಕಾರಿಗಳು ಸಂಘದ ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮಕೈಗೊಂಡು ತಕ್ಷಣ ಠೇವಣಿದಾರರಿಗೆ ಹಣ ಕೊಡಿಸುವಂತೆ ಮನವಿ ಮೂಲಕ ಒತ್ತಾಯಿಸಿದರು.

ದರ್ಶನಕುಮಾರ ಅಕ್ಕಿಸಾಗರ, ಎ.ಬಿ. ಪಾಟೀಲ, ಮೌಲಾಸಾಬ ನದಾಫ್‌ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ