ಆ್ಯಪ್ನಗರ

3ನೇ ರೈಲ್ವೆ ಗೇಟ್‌ ಮೇಲ್ಸೇತುವೆ ಕಾಮಗಾರಿ ಆರಂಭಿಸದಂತೆ ಮನವಿ

ಬೆಳಗಾವಿ: ಖಾನಾಪುರ ರಸ್ತೆಯ ರೈಲ್ವೆ ಮೇಲ್ಸೇತುವೆ ಕಾಮಗಾರಿ ಮುಗಿಯುವವರೆಗೆ 3ನೇ ಗೇಟ್‌ ರೈಲ್ವೆ ಮೇಲ್ಸೇತುವೆ ಕಾಮಗಾರಿ ಆರಂಭಿಸದಂತೆ ನಾಗರಿಕರ ವೇದಿಕೆ ...

Vijaya Karnataka 28 Sep 2018, 5:00 am
ಬೆಳಗಾವಿ:ಖಾನಾಪುರ ರಸ್ತೆಯ ರೈಲ್ವೆ ಮೇಲ್ಸೇತುವೆ ಕಾಮಗಾರಿ ಮುಗಿಯುವವರೆಗೆ 3ನೇ ಗೇಟ್‌ ರೈಲ್ವೆ ಮೇಲ್ಸೇತುವೆ ಕಾಮಗಾರಿ ಆರಂಭಿಸದಂತೆ ನಾಗರಿಕರ ವೇದಿಕೆ ಗುರುವಾರ ಪ್ರಾದೇಶಿಕ ಆಯುಕ್ತ ಪಿ.ಎ. ಮೇಘಣ್ಣವರ ಅವರಿಗೆ ಮನವಿ ಸಲ್ಲಿಸಿತು.
Vijaya Karnataka Web request not to begin construction of 3rd railway gate over bridge
3ನೇ ರೈಲ್ವೆ ಗೇಟ್‌ ಮೇಲ್ಸೇತುವೆ ಕಾಮಗಾರಿ ಆರಂಭಿಸದಂತೆ ಮನವಿ


ಖಾನಾಪುರ ರಸ್ತೆಯ ರೈಲ್ವೆ ಮೇಲ್ಸೇತುವೆ ಕಾಮಗಾರಿ ಆರಂಭವಾದಾಗಿಂದ ಕಾಂಗ್ರೆಸ್‌ ರಸ್ತೆಯಲ್ಲಿ ಟ್ರಾಫಿಕ್‌ ಸಮಸ್ಯೆ ಹೆಚ್ಚಾಗಿದೆ. ಈಗ 3ನೇ ರೈಲ್ವೆ ಗೇಟ್‌ ಕಾಮಗಾರಿ ಆರಂಭಿಸಿದರೆ ಸಮಸ್ಯೆ ಮತ್ತಷ್ಟು ಉಲ್ಬಣವಾಗಲಿದೆ. ಖಾನಾಪುರ ರಸ್ತೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ಆರಂಭಗೊಂಡು ವರ್ಷ ಸಮೀಪಿಸುತ್ತಿದ್ದರೂ, ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದೆ. ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಕೆಸಿಸಿಐ ಸದಸ್ಯರಾದ ಸತೀಶ ತೆಂಡೂಲ್ಕರ್‌, ಬಸವರಾಜ ಜವಳಿ, ವಿಕಾಸ ಕಲಘಟಗಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ