ಆ್ಯಪ್ನಗರ

ಅವಿಶ್ವಾಸ ಮಂಡನೆಗೆ ಅವಕಾಶ ಕೋರಿ ಮನವಿ

ನೇಗಿನಹಾಳ: ಸ್ಥಳೀಯ ಗ್ರಾಮ ಪಂಚಾಯಿತಿಯ 14 ಸದಸ್ಯರು ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಕಾರ್ಯವೈಖರಿ ಪ್ರಶ್ನಿಸಿ ಅವರ ...

Vijaya Karnataka 7 Aug 2018, 5:00 am
ನೇಗಿನಹಾಳ: ಸ್ಥಳೀಯ ಗ್ರಾಮ ಪಂಚಾಯಿತಿಯ 14 ಸದಸ್ಯರು ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಕಾರ್ಯವೈಖರಿ ಪ್ರಶ್ನಿಸಿ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಅವಕಾಶ ಕೋರಿ ಬೈಲಹೊಂಗಲ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
Vijaya Karnataka Web request to give opportunity for no confidence motion
ಅವಿಶ್ವಾಸ ಮಂಡನೆಗೆ ಅವಕಾಶ ಕೋರಿ ಮನವಿ


ಮೂರು ವರ್ಷಗಳ ಹಿಂದೆ ಸ್ಥಳೀಯ ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ರ ನೇಮಕದಲ್ಲಿ ನಡೆದ ಗೊಂದಲ ಇಂದಿನವರೆಗೂ ಮುಂದುವರಿದಿದೆ. ಗ್ರಾಮದಲ್ಲಿ ಸಾರ್ವಜನಿಕ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪರಿಹರಿಸಬೇಕಾಗಿರುವ ಜನಪ್ರತಿನಿಧಿಗಳ ತಿಕ್ಕಾಟವೇ ಹೆಚ್ಚಾಗಿದೆ. ವಸತಿ ಮನೆಗಳ ಹಂಚಿಕೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ. ಗ್ರಾಪಂ ಅನುದಾನದ ಖರ್ಚು ವೆಚ್ಚ ಯಾರ ಗಮನಕ್ಕೂ ಬಂದಿಲ್ಲ. ಅಂಗವಿಕಲರ ನಿಧಿ ಖರ್ಚಾಗಿರುವ ಮಾಹಿತಿ ಯಾರಿಗೂ ಇಲ್ಲ. ಇಲ್ಲೆಲ್ಲ ಅವ್ಯವಹಾರ ನಡೆದಿದ್ದು, ಸಮಗ್ರ ತನಿಖೆ ನಡೆಸಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.

ಅವ್ಯವಹಾರಗಳ ಬಗ್ಗೆ ನನಗೆ ತಿಳಿದಿಲ್ಲ. ಗ್ರಾಪಂ ಅನುದಾನ, ಯೋಜನೆಗಳನ್ನು ಪ್ರಾಮಾಣಿಕವಾಗಿ ಹಂಚಿಕೆ ಮಾಡಲು ತಿಳಿಸಿದ್ದೇನೆ.
- ಸುವರ್ಣಾ ಕಾರಿಮನಿ ಗ್ರಾಪಂ ಅಧ್ಯಕ್ಷೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ