ಬೆಳಗಾವಿ: ರಕ್ಷಣೆ ನೀಡುವ ಬದಲು ಕರ್ತವ್ಯ ನಿರತ ಪತ್ರಕರ್ತರು ಹಾಗೂ ಪತ್ರಿಕಾಲಯದ ರಾತ್ರಿ ಪಾಳಿ ಸಿಬ್ಬಂದಿಯನ್ನು ಬಂಧಿಸುತ್ತಿರುವ ಪೊಲೀಸರ ಕ್ರಮ ಖಂಡಿಸಿ ಜಿಲ್ಲಾಧಿಕಾರಿಗಳಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು. ಪತ್ರಕರ್ತರ ಮೇಲೆ ಹಲ್ಲೆ ಪ್ರಕರಣಗಳು ಸಹ ಹೆಚ್ಚುತ್ತಿದ್ದು, ಪೊಲೀಸರಿಂದ ನಿರೀಕ್ಷಿತ ಸ್ಪಂದನೆ ಸಿಗುತ್ತಿಲ್ಲ. ಸೋಮವಾರ ರಾತ್ರಿಯ ಗಲಭೆ ಸಂದರ್ಭದಲ್ಲಿ ರಾತ್ರಿ ಪಾಳಿ ಸಿಬ್ಬಂದಿ ಹಾಗೂ ವರದಿಗೆ ತೆರಳಿದ ಛಾಯಾಗ್ರಾಹಕರ ಮೇಲೆ ಹಲ್ಲೆ ನಡೆಸಲಾಗಿದೆ. ಇದರಿಂದ ಪತ್ರಕರ್ತರು ನಿರ್ಭೀತಿಯಿಂದ ಕಾರ್ಯನಿರ್ವಹಿಸಲು ಅಡ್ಡಿ ಉಂಟಾಗುತ್ತಿದೆ. ಈ ರೀತಿಯ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆಗೆ ಕಟ್ಟು ನಿಟ್ಟಿನ ಸೂಚನೆ ನೀಡಬೇಕೆಂದು ಪತ್ರಕರ್ತರ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಆಗ್ರಹಿಸಲಾಯಿತು.
ಪತ್ರಕರ್ತರಿಗೆ ರಕ್ಷಣೆ ನೀಡಲು ಆಗ್ರಹ
Vijaya Karnataka 20 Dec 2017, 5:00 am