ಆ್ಯಪ್ನಗರ

ರಸ್ತೆ ಕಾಮಗಾರಿ ಕಳಪೆ; ತನಿಖೆಗೆ ಒತ್ತಾಯ

ಬೆಳಗಾವಿ: ನಗರದಲ್ಲಿ ನಡೆದ ರಸ್ತೆ ಕಾಮಗಾರಿಗಳು ಸಂಪೂರ್ಣ ಕಳೆಪೆಯಾಗಿದ್ದು, ಈ ...

Vijaya Karnataka 28 Aug 2018, 5:00 am
ಬೆಳಗಾವಿ: ನಗರದಲ್ಲಿ ನಡೆದ ರಸ್ತೆ ಕಾಮಗಾರಿಗಳು ಸಂಪೂರ್ಣ ಕಳೆಪೆಯಾಗಿದ್ದು, ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮಾನವ ಹಕ್ಕುಗಳ ಮತ್ತು ಭ್ರಷ್ಟಾಚಾರ ನಿರ್ಮೂಲನಾ ಸಮಿತಿ ಸದಸ್ಯರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿ ಜಿಲ್ಲಾಧಿಕಾರಿ ಎಸ್‌. ಜಿಯಾವುಲ್ಲಾ ಅವರಿಗೆ ಮನವಿ ಸಲ್ಲಿಸಿದರು.
Vijaya Karnataka Web BEL-27 LBS 1


ಮಹಾನಗರ ಪಾಲಿಕೆ ಪ್ರತಿ ವರ್ಷ ರಸ್ತೆ, ಒಳಚರಂಡಿ, ಉದ್ಯಾನವನ ಸೇರಿದಂತೆ ಇನ್ನಿತರ ಕಾಮಗಾರಿಗಳಿಗೆ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದೆ. ಆದರೆ, ಸಮಸ್ಯೆಗಳಿಗೆ ಮಾತ್ರ ಪರಿಹಾರ ಸಿಗುತ್ತಿಲ್ಲ. ಮಳೆಗಾಲ ಬಂದರೆ ಚರಂಡಿ ನೀರೆಲ್ಲಾ ರಸ್ತೆ ಮೇಲೆ ಬರುತ್ತದೆ. ಮನೆಗಳಿಗೆ ನುಗ್ಗುತ್ತದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಡಾಂಬರೀಕರಣ ಮಾಡಲಾದ ರಸ್ತೆಗಳೆಲ್ಲ ಹಾಳಾಗಿವೆ. ಅಭಿವೃದ್ಧಿ ಕಾಮಗಾರಿಗಳ ಹೆಸರಿನಲ್ಲಿ ಪಾಲಿಕೆ ಅಧಿಕಾರಿಗಳು, ಸದಸ್ಯರು ಕೋಟ್ಯಂತರ ರೂ. ಅನುದಾನ ದುರುಪಯೋಗ ಪಡಿಸಿಕೊಂಡಿದ್ದಾರೆ. ಕಾರಣ ಈ ಬಗ್ಗೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಗಂಗಾಧರ ದೊಡಮನಿ, ಶ್ರೀನಾಥ ಓಬಯ್ಯಾ, ಆನಂದ ಭೋಪಳಾಪುರ, ಆನಂದ ಬಡಿಗೇರ, ವಿಕಾಸ ಕಲ್ಲಪತ್ರಿ, ದತ್ತಾ ಬಿಲಾವರ, ಅಮೀತ ಲೋಹಾರ ಮುಂತಾದವರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ