ಆ್ಯಪ್ನಗರ

ಬಡಾವಣೆ ಅಭಿವೃದ್ಧಿಗೆ 3.50 ಕೋಟಿ ರೂ. ಮಂಜೂರು

ಬಡಾವಣೆ ಅಭಿವೃದ್ಧಿಗೆ 350 ಕೋಟಿ ರೂ...

Vijaya Karnataka 15 Aug 2018, 5:00 am
ಬೆಳಗಾವಿ: ಗ್ರಾಮೀಣ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ಬೆಳಗಾವಿಯ ಜ್ಯೋತಿ ನಗರ, ಗಣೇಶಪುರ ಹಾಗೂ ಕ್ರಾಂತಿ ನಗರದ ಅಭಿವೃದ್ಧಿಗೆ 3.50 ಕೋಟಿ ರೂ. ಮಂಜೂರಾಗಿದ್ದು, ಇವುಗಳನ್ನು ಕ್ಷೇತ್ರದ ಮಾದರಿ ಬಡಾವಣೆಗಳಾಗಿ ಅಭಿವೃದ್ಧಿ ಪಡಿಸುವ ಸಂಕಲ್ಪ ಮಾಡಿದ್ದೇನೆ ಎಂದು ಶಾಸಕಿ ಲಕ್ಷ್ಮೇ ಹೆಬ್ಬಾಳಕರ ಹೇಳಿದರು.
Vijaya Karnataka Web BEL-14 LBS 19


ತಾಲೂಕಿನ ಬೆನಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ರಾಂತಿ ನಗರದಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಈ ಮೂರು ಬಡಾವಣೆಗಳ ಅಭಿವೃದ್ಧಿಗಾಗಿ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ಭೇಟಿಯಾಗಿ ಪ್ರಗತಿ ಕಾಲನಿ ಯೋಜನೆಯಡಿ ಅನುದಾನ ಮಂಜೂರು ಮಾಡಿಸಿದ್ದೇನೆ. ಈ ಬಡಾವಣೆಗಳು ತೀರಾ ಹಿಂದುಳಿದಿದ್ದು, ಅಭಿವೃದ್ಧಿಗಾಗಿ ಇನ್ನೊಂದು ಕೋಟಿ ರೂ. ಬಿಡುಗಡೆ ಮಾಡುವಂತೆ ಸರಕಾರಕ್ಕೆ ಒತ್ತಾಯಿಸಿದ್ದೇನೆ ಎಂದರು.

ಇಲ್ಲಿಯ ಜನ ತಮ್ಮ ಬಡಾವಣೆಯ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು. ಅಭಿವೃದ್ಧಿಯ ವಿಷಯದಲ್ಲಿ ರಾಜಕಾರಣ ಮಾಡುವುದಿಲ್ಲ. ಅಧಿಕಾರ ಇರುವವರೆಗೆ ನಿಮ್ಮ ಸೇವೆ ಮಾಡುತ್ತೇನೆ. ಯಾವುದೇ ಸಮಸ್ಯೆ ಇದ್ದರೂ ನೇರವಾಗಿ ಗಮನಕ್ಕೆ ತನ್ನಿ. ಗ್ರಾಮೀಣ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಮಾಡುತ್ತೇನೆ ಎಂದು ಅವರು ಭರವಸೆ ನೀಡಿದರು.

ಕಾಂಗ್ರೆಸ್‌ ಮುಖಂಡ ಯುವರಾಜ ಕದಂ, ಜಿಪಂ ಉಪಾಧ್ಯಕ್ಷ ಅರುಣ ಕಟಾಂಬಳೆ, ಮೌನೇಶ್ವರ ಗರಗ, ರಮೇಶ ಹಿರೋಜಿ, ಕೃಷ್ಣಾ ಪಾಟೀಲ, ವಿವೇಕ ಜಾಧವ, ಸುನಿಲ ಸುರ್ವೇ, ಕೃಷ್ಣಾ ಕಟಾಂಬಳೆ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ