ಆ್ಯಪ್ನಗರ

‘ಸತೀಶ ಜಾರಕಿಹೊಳಿ ತಲೆ ಸರಿ ಇಲ್ಲ. ಅವನನ್ನು ಧಾರವಾಡದ ಮೆಂಟಲ್ ಆಸ್ಪತ್ರೆಗೆ ಸೇರಿಸಬೇಕು’

ಬೆಳಗಾವಿಯಲ್ಲಿ ಮಾತನಾಡಿರುವ ಅನರ್ಹ ಶಾಸಕ ರಮೇಶ್‌ ಜಾರಕಿಹೊಳಿ, ‘ಸತೀಶ ಜಾರಕಿಹೊಳಿಗೆ ತಲೆ ಸರಿ ಇಲ್ಲ. ಅವನನ್ನು ಧಾರವಾಡದ ಮೆಂಟಲ್ ಆಸ್ಪತ್ರೆಗೆ ಸೇರಿಸಬೇಕು,’ ಎಂದು ಹರಿಹಾಯ್ದಿದ್ದಾರೆ.

Vijaya Karnataka Web 28 Sep 2019, 5:22 pm
ಬೆಳಗಾವಿ: ಯಮಕನಮರಡಿ ಶಾಸಕ ಹಾಗೂ ತಮ್ಮ ಸ್ವಂತ ತಮ್ಮ ಸತೀಶ್‌ ಜಾರಕಿಹೊಳಿ ವಿರುದ್ಧ ಅನರ್ಹ ಶಾಸಕ ರಮೇಶ್‌ ಜಾರಕಿಹೊಳಿ ಮತ್ತೆ ಕಿಡಿಕಾರಿದ್ದಾರೆ.
Vijaya Karnataka Web Rebel MLAs Ramesh Jarkiholi


ಬೆಳಗಾವಿಯಲ್ಲಿ ಮಾತನಾಡಿರುವ ಅವರು, ‘ಸತೀಶ ಜಾರಕಿಹೊಳಿಗೆ ತಲೆ ಸರಿ ಇಲ್ಲ. ಅವನನ್ನು ಧಾರವಾಡದ ಮೆಂಟಲ್ ಆಸ್ಪತ್ರೆಗೆ ಸೇರಿಸಬೇಕು,’ ಎಂದು ಹರಿಹಾಯ್ದಿದ್ದಾರೆ.

ಇದೇ ವೇಳೆ ತಮ್ಮ ಗುರು ಸಿದ್ದರಾಮಯ್ಯ ವಿರುದ್ಧವೂ ಹರಿಹಾಯ್ದಿರುವ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‍ಗೆ ಬರುವುದಕ್ಕಿಂತ 20 ವರ್ಷ ಮೊದಲು ನಾವು ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಿದವರು. ಸಿದ್ದರಾಮಯ್ಯ ಅವರೇ ಜೆಡಿಎಸ್‍ನಿಂದ ಕಾಂಗ್ರೆಸ್‍ಗೆ ವಲಸೆ ಬಂದವರು,” ಎಂದು ತಿರುಗೇಟು ನೀಡಿದ್ದಾರೆ.

ಉಪಚುನಾವಣೆಗೆ ಮತ್ತೆ ಮುಹೂರ್ತ ಫಿಕ್ಸ್!: ಡಿಸೆಂಬರ್ 5ಕ್ಕೆ ವೋಟಿಂಗ್, 11ಕ್ಕೆ ರಿಸಲ್ಟ್

ನಾವು ರಾಜೀನಾಮೆ ನೀಡಿದ್ದು ಬಿಜೆಪಿಗೆ ಸೇರೋದಕ್ಕೆ ಅಲ್ಲ. ಕುಮಾರಸ್ವಾಮಿ ಸರ್ಕಾರ ನಮಗೆ ಅನ್ಯಾಯ ಮಾಡಿದೆ. ಅನುದಾನ ಕೇಳಿದಾಗ ನಮಗೆ ಸರಿಯಾಗಿ ಸ್ಪಂದನೆ ನೀಡಿಲ್ಲ ಎಂಬುದಾಗಿ ಗೋಕಾಕ್‌ ಮಾಜಿ ಶಾಸಕ ರಮೇಶ್‌ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.

ರಮೇಶ್‌ ಜಾರಕಿಹೊಳಿ ಅವರ ಗೋಕಾಕ್‌ ಕ್ಷೇತ್ರಕ್ಕೆ ಡಿಸೆಂಬರ್‌ 5ರಂದು ಚುನಾವಣೆ ನಿಗದಿಯಾಗಿದೆ. ಇನ್ನೊಂದೆಡೆ ರಮೇಶ್‌ ಜಾರಕಿಹೊಳಿ ಸೇರಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ