ಬೆಳಗಾವಿ: ಯಮಕನಮರಡಿ ಶಾಸಕ ಹಾಗೂ ತಮ್ಮ ಸ್ವಂತ ತಮ್ಮ ಸತೀಶ್ ಜಾರಕಿಹೊಳಿ ವಿರುದ್ಧ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಮತ್ತೆ ಕಿಡಿಕಾರಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿರುವ ಅವರು, ‘ಸತೀಶ ಜಾರಕಿಹೊಳಿಗೆ ತಲೆ ಸರಿ ಇಲ್ಲ. ಅವನನ್ನು ಧಾರವಾಡದ ಮೆಂಟಲ್ ಆಸ್ಪತ್ರೆಗೆ ಸೇರಿಸಬೇಕು,’ ಎಂದು ಹರಿಹಾಯ್ದಿದ್ದಾರೆ.
ಇದೇ ವೇಳೆ ತಮ್ಮ ಗುರು ಸಿದ್ದರಾಮಯ್ಯ ವಿರುದ್ಧವೂ ಹರಿಹಾಯ್ದಿರುವ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ಗೆ ಬರುವುದಕ್ಕಿಂತ 20 ವರ್ಷ ಮೊದಲು ನಾವು ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಿದವರು. ಸಿದ್ದರಾಮಯ್ಯ ಅವರೇ ಜೆಡಿಎಸ್ನಿಂದ ಕಾಂಗ್ರೆಸ್ಗೆ ವಲಸೆ ಬಂದವರು,” ಎಂದು ತಿರುಗೇಟು ನೀಡಿದ್ದಾರೆ.
ಉಪಚುನಾವಣೆಗೆ ಮತ್ತೆ ಮುಹೂರ್ತ ಫಿಕ್ಸ್!: ಡಿಸೆಂಬರ್ 5ಕ್ಕೆ ವೋಟಿಂಗ್, 11ಕ್ಕೆ ರಿಸಲ್ಟ್
ನಾವು ರಾಜೀನಾಮೆ ನೀಡಿದ್ದು ಬಿಜೆಪಿಗೆ ಸೇರೋದಕ್ಕೆ ಅಲ್ಲ. ಕುಮಾರಸ್ವಾಮಿ ಸರ್ಕಾರ ನಮಗೆ ಅನ್ಯಾಯ ಮಾಡಿದೆ. ಅನುದಾನ ಕೇಳಿದಾಗ ನಮಗೆ ಸರಿಯಾಗಿ ಸ್ಪಂದನೆ ನೀಡಿಲ್ಲ ಎಂಬುದಾಗಿ ಗೋಕಾಕ್ ಮಾಜಿ ಶಾಸಕ ರಮೇಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.
ರಮೇಶ್ ಜಾರಕಿಹೊಳಿ ಅವರ ಗೋಕಾಕ್ ಕ್ಷೇತ್ರಕ್ಕೆ ಡಿಸೆಂಬರ್ 5ರಂದು ಚುನಾವಣೆ ನಿಗದಿಯಾಗಿದೆ. ಇನ್ನೊಂದೆಡೆ ರಮೇಶ್ ಜಾರಕಿಹೊಳಿ ಸೇರಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿ ನಡೆಯುತ್ತಿದೆ.
ಬೆಳಗಾವಿಯಲ್ಲಿ ಮಾತನಾಡಿರುವ ಅವರು, ‘ಸತೀಶ ಜಾರಕಿಹೊಳಿಗೆ ತಲೆ ಸರಿ ಇಲ್ಲ. ಅವನನ್ನು ಧಾರವಾಡದ ಮೆಂಟಲ್ ಆಸ್ಪತ್ರೆಗೆ ಸೇರಿಸಬೇಕು,’ ಎಂದು ಹರಿಹಾಯ್ದಿದ್ದಾರೆ.
ಇದೇ ವೇಳೆ ತಮ್ಮ ಗುರು ಸಿದ್ದರಾಮಯ್ಯ ವಿರುದ್ಧವೂ ಹರಿಹಾಯ್ದಿರುವ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ಗೆ ಬರುವುದಕ್ಕಿಂತ 20 ವರ್ಷ ಮೊದಲು ನಾವು ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಿದವರು. ಸಿದ್ದರಾಮಯ್ಯ ಅವರೇ ಜೆಡಿಎಸ್ನಿಂದ ಕಾಂಗ್ರೆಸ್ಗೆ ವಲಸೆ ಬಂದವರು,” ಎಂದು ತಿರುಗೇಟು ನೀಡಿದ್ದಾರೆ.
ಉಪಚುನಾವಣೆಗೆ ಮತ್ತೆ ಮುಹೂರ್ತ ಫಿಕ್ಸ್!: ಡಿಸೆಂಬರ್ 5ಕ್ಕೆ ವೋಟಿಂಗ್, 11ಕ್ಕೆ ರಿಸಲ್ಟ್
ನಾವು ರಾಜೀನಾಮೆ ನೀಡಿದ್ದು ಬಿಜೆಪಿಗೆ ಸೇರೋದಕ್ಕೆ ಅಲ್ಲ. ಕುಮಾರಸ್ವಾಮಿ ಸರ್ಕಾರ ನಮಗೆ ಅನ್ಯಾಯ ಮಾಡಿದೆ. ಅನುದಾನ ಕೇಳಿದಾಗ ನಮಗೆ ಸರಿಯಾಗಿ ಸ್ಪಂದನೆ ನೀಡಿಲ್ಲ ಎಂಬುದಾಗಿ ಗೋಕಾಕ್ ಮಾಜಿ ಶಾಸಕ ರಮೇಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.
ರಮೇಶ್ ಜಾರಕಿಹೊಳಿ ಅವರ ಗೋಕಾಕ್ ಕ್ಷೇತ್ರಕ್ಕೆ ಡಿಸೆಂಬರ್ 5ರಂದು ಚುನಾವಣೆ ನಿಗದಿಯಾಗಿದೆ. ಇನ್ನೊಂದೆಡೆ ರಮೇಶ್ ಜಾರಕಿಹೊಳಿ ಸೇರಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿ ನಡೆಯುತ್ತಿದೆ.