ಆ್ಯಪ್ನಗರ

ಅಧಿಕಾರಿಗಳ ವರ್ಗಾವಣೆಗೆ ಸತೀಶ್‌ ಜಾರಕಿಗೊಳಿ ಮನವಿ

ಗೋಕಾಕ: ಉಪಚುನಾವಣೆ ನ್ಯಾಯ ಸಮ್ಮತ ಹಾಗೂ ನಿಷ್ಪಕ್ಷಪಾತವಾಗಿ ನಡೆಯುವ ನಿಟ್ಟಿನಲ್ಲಿ ...

Vijaya Karnataka 11 Oct 2019, 5:00 am
ಗೋಕಾಕ: ಉಪಚುನಾವಣೆ ನ್ಯಾಯ ಸಮ್ಮತ ಹಾಗೂ ನಿಷ್ಪಕ್ಷಪಾತವಾಗಿ ನಡೆಯುವ ನಿಟ್ಟಿನಲ್ಲಿಗೋಕಾಕದ ಕೆಲ ಅಧಿಕಾರಿಗಳನ್ನು ವರ್ಗಾಯಿಸುವಂತೆ ಶಾಸಕ ಸತೀಶ್‌ ಜಾರಕಿಹೊಳಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಅವರಿಗೆ ಮನವಿ ಮಾಡಿದ್ದಾರೆ.
Vijaya Karnataka Web satish jarkiholi urges for transfer of officials
ಅಧಿಕಾರಿಗಳ ವರ್ಗಾವಣೆಗೆ ಸತೀಶ್‌ ಜಾರಕಿಗೊಳಿ ಮನವಿ


ಗುರುವಾರ ಚುನಾವಣಾಧಿಕಾರಿಯನ್ನು ಭೇಟಿ ಮಾಡಿರುವ ಅವರು, ಡಿಸೆಂಬರ್‌ನಲ್ಲಿನಡೆಯಲಿರುವ ಉಪಚುನಾವಣೆಯಲ್ಲಿಅಕ್ರಮ ನಡೆಯದಂತೆ ಜಾಗೃತಿ ವಹಿಸುವ ನಿಟ್ಟಿನಲ್ಲಿಗೋಕಾಕ ತಾಪಂ ಕಾರ‍್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಂಯಿಕ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ ಬಳಿಗಾರ, ತಾಪಂನ ಪ್ರಭಾರಿ ಸಹಾಯಕ ನಿರ್ದೇಶಕ ಎಸ್‌.ಎಚ್‌. ದೇಸಾಯಿ ಹಾಗೂ ಅಂಕಲಗಿಯ ಗ್ರಾಮ ಲೆಕ್ಕಾಧಿಕಾರಿ ಶಿವಾನಂದ ಹಿರೇಮಠ ಅವರನ್ನು ವರ್ಗಾಯಿಸಬೇಕು. ಇವರು ಮೂಲತಃ ಬೆಳಗಾವಿ ಜಿಲ್ಲೆಯವರಾಗಿದ್ದು, ಇವರನ್ನು ಬೇರೆ ಜಿಲ್ಲೆಗೆ ವರ್ಗಾಯಿಬೇಕೆಂದು ಒತ್ತಾಯಿಸಿದ್ದಾರೆ.

ಶಾಸಕರ ಮನವಿಗೆ ಸ್ಪಂದಿಸಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿ ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ