ಆ್ಯಪ್ನಗರ

ಎಸ್‌ಸಿಪಿ, ಟಿಎಸ್‌ಪಿ ಶೇ. 100 ಸಾಧನೆಗೆ ಡಿಸಿ ಸೂಚನೆ

ಎಸ್‌ಸಿಪಿ, ಟಿಎಸ್‌ಪಿ ಶೇ...

Vijaya Karnataka 26 Aug 2018, 5:00 am
ಬೆಳಗಾವಿ: ವಿಶೇಷ ಘಟಕ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ನೀಡಲಾದ ವಾರ್ಷಿಕ ಗುರಿ ಸಾಧಿಸಲು ಆರ್ಥಿಕ ವರ್ಷದ ಆರಂಭದಿಂದಲೇ ಪ್ರತಿ ತಿಂಗಳ ಗುರಿಯನ್ನು ಕಡ್ಡಾಯವಾಗಿ ಶೇ.100ರಷ್ಟು ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಎಸ್‌. ಜಿಯಾವುಲ್ಲಾ ಸೂಚನೆ ನೀಡಿದರು.
Vijaya Karnataka Web BLG-2508-2-52-25PRAMOD3


ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಗಳ ಪ್ರಸಕ್ತ ಸಾಲಿನ ಜುಲೈ ಅಂತ್ಯದವರೆಗಿನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷ ತೆ ವಹಿಸಿ ಅವರು ಮಾತನಾಡಿದರು.

ಬಹುತೇಕ ಇಲಾಖೆಗಳಲ್ಲಿ ಇನ್ನೂ ಕ್ರಿಯಾ ಯೋಜನೆ ಅನುಮೋದನೆಗೊಂಡಿಲ್ಲ. ಅನುದಾನ ಬಿಡುಗಡೆಯಾಗಿಲ್ಲ ಹಾಗೂ ಫಲಾನುಭವಿಗಳ ಆಯ್ಕೆ ಆಗಿಲ್ಲ. ಆದ್ದರಿಂದ ಜುಲೈ ಅಂತ್ಯಕ್ಕೆ ನಿರೀಕ್ಷಿತ ಪ್ರಗತಿ ಆಗಿರುವುದಿಲ್ಲ. ಮುಂಬರುವ ದಿನಗಳಲ್ಲಿ ಪ್ರತಿ ತಿಂಗಳು ಕಡ್ಡಾಯವಾಗಿ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುವುದು. ವರ್ಷದ ಕೊನೆಗೆ ತರಾತುರಿಯಲ್ಲಿ ಅನುದಾನ ಖರ್ಚು ಮಾಡುವ ಬದಲು ಆರಂಭದಿಂದಲೇ ಪ್ರತಿ ತಿಂಗಳು ನಿಗದಿಪಡಿಸಿದ ಗುರಿಗೆ ತಕ್ಕಂತೆ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.

ಪರಿಶೀಲನಾ ತಂಡ ರಚನೆ: ಎಸ್‌ಸಿಪಿ, ಟಿಎಸ್‌ಪಿ ಅಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳು ಹಾಗೂ ಸೌಲಭ್ಯ ವಿತರಣೆಯನ್ನು ಅರ್ಹರಿಗೆ ತಲುಪಿಸಿರುವ ಬಗ್ಗೆ ಪರಿಶೀಲಿಸಲು ವಿಶೇಷ ಪರಿಶೀಲನಾ ತಂಡ ರಚಿಸಲಾಗುವುದು. ಎಸ್‌ಸಿಪಿ, ಟಿಎಸ್‌ಪಿ ಅನುಷ್ಠಾನದಲ್ಲಿ ನಿರ್ಲಕ್ಷ ್ಯ ತೋರಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ಎಚ್ಚರಿಸಿದರು.

ಸಾರಿಗೆ ಇಲಾಖೆಯು ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಬಸ್‌ನಿಲ್ದಾಣ ನಿರ್ಮಿಸಿರುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಈ ಅನುದಾನದಡಿಯಲ್ಲಿ ಬಸ್‌ ನಿಲ್ದಾಣ ನಿರ್ಮಾಣಕ್ಕೆ ಅವಕಾಶ ಇರುವ ಅಥವಾ ಬಸ್‌ ನಿಲ್ದಾಣ ನಿರ್ಮಿಸಿರುವ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ನೀರಾವರಿ ಇಲಾಖೆಯಲ್ಲಿ ಹೆಚ್ಚು ಅನುದಾನ ಲಭ್ಯವಾಗುವುದರಿಂದ ಅದರ ಅನುದಾನ ಬಳಕೆಯ ಕುರಿತು ಪರಿಶೀಲಿಸಲು ಪ್ರತ್ಯೇಕ ತಂಡ ರಚಿಸುವಂತೆ ನಿರ್ದೇಶನ ನೀಡಿದರು. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಇದುವರೆಗೆ ಕೆಲವು ಇಲಾಖೆಗಳಲ್ಲಿ ಅನುದಾನ ಬಿಡುಗಡೆಯಾಗದಿರುವ ಬಗ್ಗೆ ರಾಜ್ಯಮಟ್ಟದ ಸಭೆಯಲ್ಲಿ ಚರ್ಚಿಸಿ ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತರುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಶಾಸಕಿ ಲಕ್ಷ್ಮೀ ಹೆಬ್ಬಾಳಕರ, ಪ್ರಚಾರ ಇಲ್ಲದೆ ಸರಕಾರದ ಬಹುತೇಕ ಯೋಜನೆಗಳು ಅರ್ಹರಿಗೆ ತಲುಪುತ್ತಿಲ್ಲ ಎಂದರು. ಶಾಸಕ ಅನಿಲ್‌ ಬೆನಕೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಡಾ.ಉಮಾ ಸಾಲಿಗೌಡರ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ