ಆ್ಯಪ್ನಗರ

ಕನ್ನಡ ಭವನಕ್ಕೆ ಸಿದ್ಧೇಶ್ವರ ಸ್ವಾಮೀಜಿ ಭೇಟಿ

ಬೆಳಗಾವಿ: ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ...

Vijaya Karnataka 27 Mar 2019, 5:00 am
ಬೆಳಗಾವಿ : ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಶ್ರೀಗಳು ಮಂಗಳವಾರ ನಗರದ 'ಕನ್ನಡ ಭವನ'ಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
Vijaya Karnataka Web BLG-2603-2-52-26RAJU-8


ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ ಕೋರೆ, ಕಟ್ಟಡದ ಎಲ್ಲ ವಿಭಾಗಗಳ ವಿವರ ಹಾಗೂ ಅವುಗಳ ಉಪಯೋಗದ ಕುರಿತು ತಿಳಿಸಿದರು. ಎಲ್ಲವನ್ನೂ ಅವಲೋಕಿಸಿದ ಶ್ರೀಗಳು ಗಡಿಭಾಗಕ್ಕೆ ಅದರಲ್ಲೂ ವಿಶೇಷವಾಗಿ ಬೆಳಗಾವಿಗೆ ಇಂಥ ಸುಸಜ್ಜಿತ ಕಟ್ಟಡದ ಅಗತ್ಯವಿತ್ತು. ಅದನ್ನು ಸಾಂಘಿಕವಾಗಿ ಪ್ರಯತ್ನ ಮಾಡಿ ಪೂರೈಸಿದ್ದೀರಿ. ಉಳಿದುಕೊಂಡಿರುವ ಇತರೆ ಕೆಲಸಗಳೂ ಬೇಗನೇ ಪೂರ್ಣಗೊಂಡು ಕನ್ನಡಪರ ಚಟುವಟಿಕೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ತೆರೆದುಕೊಳ್ಳಬೇಕೆಂದು ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷರಾದ ಡಾ. ಬಸವರಾಜ ಜಗಜಂಪಿ, ಯ.ರು. ಪಾಟೀಲ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಜ್ಯೋತಿ ಬದಾಮಿ, ಕಟ್ಟಡದ ಗುತ್ತಿಗೆದಾರ ಮಹಾಂತೇಶ ಕಾಗತಿಕರ ಹಾಗೂ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

2003ರಲ್ಲಿ ಬೆಳಗಾವಿಯಲ್ಲಿ ಜರುಗಿದ 70ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸವಿನೆನಪಿಗೆ ಡಾ. ಪ್ರಭಾಕರ ಕೋರೆ ಮತ್ತು ತಂಡದವರು ಸಮ್ಮೇಳನ ಸಂದರ್ಭದಲ್ಲಿ ಉಳಿದ ಹಣ ಹಾಗೂ ಸರಕಾರದ ನೆರವಿನೊಂದಿಗೆ ಕನ್ನಡ ಭವನ ನಿರ್ಮಿಸಿದ್ದಾರೆ. ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸರಕಾರದ ನೆರವಿಗಾಗಿ ಕಾಯುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ