ಆ್ಯಪ್ನಗರ

ಶಿವಾಪುರ ಗ್ರಾಮದ ಸೈನಿಕ ನಿಧನ

ಮೂಡಲಗಿ: ತಾಲೂಕಿನ ಶಿವಾಪುರ (ಹ) ಗ್ರಾಮದ ಸೈನಿಕ ವಿಠ್ಠಲ ರಾಮಪ್ಪ ಮೇತ್ರಿ (43) ಅನಾರೋಗ್ಯದಿಂದ ದೆಹಲಿ ಆಸ್ಪತ್ರೆಯಲ್ಲಿ ಗುರುವಾರ ಮಧ್ಯಾಹ್ನ ನಿಧನರಾದರು...

Vijaya Karnataka 24 May 2019, 5:00 am
ಮೂಡಲಗಿ : ತಾಲೂಕಿನ ಶಿವಾಪುರ (ಹ) ಗ್ರಾಮದ ಸೈನಿಕ ವಿಠ್ಠಲ ರಾಮಪ್ಪ ಮೇತ್ರಿ (43) ಅನಾರೋಗ್ಯದಿಂದ ದೆಹಲಿ ಆಸ್ಪತ್ರೆಯಲ್ಲಿ ಗುರುವಾರ ಮಧ್ಯಾಹ್ನ ನಿಧನರಾದರು.
Vijaya Karnataka Web BLG-2305-2-52-23MDL3


ವಿಠ್ಠಲ ಮೇತ್ರಿ ಅವರು ಪ್ರಾಥಮಿಕ ಶಿಕ್ಷ ಣವನ್ನು ಶಿವಾಪುರ (ಹ)ದಲ್ಲಿ ಹಾಗೂ ಪ್ರೌಢ ಶಾಲಾ ಶಿಕ್ಷ ಣವನ್ನು ಹುಕ್ಕೇರಿಯಲ್ಲಿ ಮುಗಿಸಿ, 1995ರಲ್ಲಿ ಸೇನೆ ಸೇರಿದ್ದರು. ಪ್ರಥಮ ಅವಧಿಯ 18 ವರ್ಷ ಸೇವೆ ಸಲ್ಲಿಸಿ ಮತ್ತೆ ಸೇನೆಯಲ್ಲಿ ಮುಂದುವರಿದಿದ್ದರು. ಕಳೆದ ಏಳೆಂಟು ದಿನಗಳಿಂದ ಅನಾರೋಗ್ಯದ ಕಾರಣ ದೆಹಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಗುರುವಾರ ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು.

ಸೈನಿಕ ವಿಠ್ಠಲ ಮೇತ್ರಿ ಅವರ ಮೃತದೇಹವು ಶುಕ್ರವಾರ ಮಧ್ಯಾಹ್ನ ದೆಹಲಿಯಿಂದ ಬೆಳಗಾವಿ ಮಾರ್ಗವಾಗಿ ಅವರ ಸ್ವಗ್ರಾಮಕ್ಕೆ ತಲುಪಲಿದೆ. ಸಾರ್ವಜನಿಕರ ದರ್ಶನಕ್ಕೆ ಸರಕಾರಿ ಪ್ರೌಢ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದ್ದು, ನಂತರ ಸಕಲ ಸರಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.

ಮೃತರು ತಾಯಿ, ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ