ಆ್ಯಪ್ನಗರ

ಅಕ್ರಮಗಳ ಕಡಿವಾಣಕ್ಕೆ ವಿಶೇಷ ತಂಡ

ನಿಪ್ಪಾಣಿ: ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಂದ ...

Vijaya Karnataka 3 Nov 2019, 5:00 am
ನಿಪ್ಪಾಣಿ: ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಂದ ಜಿಲ್ಲೆಯಲ್ಲಿಮಾದಕ ವಸ್ತುಗಳ ಅಕ್ರಮ ವಹಿವಾಟು ನಡೆಯುತ್ತಿದ್ದು, ಇವುಗಳಿಗೆ ಕಡಿವಾಣ ಹಾಕಲು ವಿಶೇಷ ಕಾರ್ಯಾಚರಣೆ ತಂಡ ರಚಿಸಲಾಗಿದೆ. ಈ ದಂಧೆಯನ್ನು ಬೇರು ಸಹಿತ ಕಿತ್ತುಹಾಕಲು ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ನಿರ್ದೇಶನ ನೀಡಲಾಗಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
Vijaya Karnataka Web 2NIPPANI075330


ಪಟ್ಟಣದಲ್ಲಿಶನಿವಾರ ಅಗ್ನಿಶಾಮಕ ಠಾಣೆಯ ನೂತನ ಕಟ್ಟಡ ಹಾಗೂ ಸಿಬ್ಬಂದಿಯ ವಸತಿಗೃಹಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ''ಮಾದಕ ವಸ್ತು ಸೇರಿದಂತೆ ಯಾವುದೇ ಅಕ್ರಮ ಚಟುವಟಿಕೆಗಳಲ್ಲಿಅಧಿಕಾರಿಗಳ ಪಾತ್ರ ಕಂಡು ಬಂದರೆ ಅಂಥವರನ್ನು 24 ಗಂಟೆಯೊಳಗೆ ಅಮಾನತುಗೊಳಿಸಲಾಗುವುದು'', ಎಂದು ಎಚ್ಚರಿಕೆ ನೀಡಿದರು.

20 ಕೋಟಿ ಅನುದಾನ: ''ತುರ್ತು ಸಂದರ್ಭಗಳಲ್ಲಿಸಮರ್ಥವಾಗಿ ಕಾರ್ಯ ನಿರ್ವಸಲು ಅನುಕೂಲವಾಗುವಂತೆ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್‌)ಯನ್ನು ಬಲಪಡಿಸಲು 20 ಕೋಟಿ ರೂ. ಅನುದಾನಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) ಮಾದರಿಯಲ್ಲಿಸಿಬ್ಬಂದಿ ನೇಮಕ, ತರಬೇತಿ, ಸಾಧನ-ಸಲಕರಣೆಗಳನ್ನು ಒದಗಿಸಲಾಗುವುದು'', ಎಂದ ಸಚಿವರು, ''ರಾಜ್ಯದಲ್ಲಿರುವ ಶೇ.60 ರಷ್ಟು ಪೊಲೀಸ್‌ ಸಿಬ್ಬಂದಿಗೆ ವಸತಿಗೃಹ ಸೌಲಭ್ಯ ಕಲ್ಪಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿಶೇ.80 ಸಿಬ್ಬಂದಿಗೆ ಸೌಲಭ್ಯ ವಿಸ್ತರಿಸಲಾಗುವುದು'', ಎಂದರು. ''ನಿಪ್ಪಾಣಿಯ ಮೂರು ಪೊಲೀಸ್‌ ಠಾಣೆಗಳಿಗೆ ನೂತನ ಕಟ್ಟಡ ನಿರ್ಮಿಸಲು ಕೂಡ ಮುಂದಿನ ಆಯವ್ಯಯದಲ್ಲಿಅನುದಾನ ಮೀಸಲಿಡಲಾಗುವುದು'', ಎಂದೂ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ, 2013ರಿಂದ ನಡೆಸಿದ ಪ್ರಯತ್ನದ ಪರಿಣಾಮ ಇಂದು ಪೂರ್ಣಪ್ರಮಾಣದ ಅಗ್ನಿಶಾಮಕ ಠಾಣೆ ಮತ್ತು ಸಿಬ್ಬಂದಿ ವಸತಿಗೃಹ ನಿರ್ಮಾಣಗೊಂಡಿವೆ. ಅಧಿಕಾರಿಗಳ ತುರ್ತು ಸಂಚಾರಕ್ಕೆ ವಾಹನ ಕೊರತೆ ಮನಗಂಡು ಟೌನ್‌ ಪೊಲೀಸ್‌ ಠಾಣೆಗೆ ಶಾಸಕರ ಅನುದಾನದಲ್ಲಿ ವಾಹನ ನೀಡಿರುವುದಾಗಿ ಹೇಳಿದರು.

ವಿಧಾನಪರಿಷತ್‌ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಸುನಿಲ್‌ ಅಗರವಾಲ್‌ ಮಾತನಾಡಿದರು. ಶಾಸಕ ದುರ್ಯೋಧನ ಐಹೊಳೆ, ಸಂಸದ ಅಣ್ಣಾಸಾಹೇಬ್‌ ಜೊಲ್ಲೆ, ಪ್ರಾದೇಶಿಕ ಆಯುಕ್ತ ಅಮ್ಲಾನ್‌ ಆದಿತ್ಯ ಬಿಸ್ವಾಸ್‌, ಐಜಿಪಿ ಎಚ್‌.ಜಿ.ರಾಘವೇಂದ್ರ ಸುಹಾಸ್‌, ಪೊಲೀಸ್‌ ವರಿಷ್ಠ ಲಕ್ಷ್ಮಣ ನಿಂಬರಗಿ, ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ಚೇರ್ಮನ್‌ ಚಂದ್ರಕಾಂತ ಕೋಠಿವಾಲೆ, ಉಪಾಧ್ಯಕ್ಷ ಮಲಗೊಂಡ ಪಾಟೀಲ, ಎಪಿಎಂಸಿ ಅಧ್ಯಕ್ಷ ಅಮಿತ ಸಾಳವೆ, ನಿಪ್ಪಾಣಿ ನಗರಸಭೆ ಸದಸ್ಯರು ಉಪಸ್ಥಿತರಿದ್ದರು. ಅಗ್ನಿಶಾಮಕ ದಳದ ಉಪ ನಿರ್ದೇಶಕ ಸಿ. ಬಸವಣ್ಣ ಸ್ವಾಗತಿಸಿದರು. ರಮೇಶ ಪಾಟೀಲ ನಿರೂಪಿಸಿದರು.

ಈ ಭಾಗದ ಬೇಡಿಕೆಯಂತೆ ಚಿಕ್ಕೋಡಿಗೆ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಹುದ್ದೆಯನ್ನು ಶೀಘ್ರ ಮಂಜೂರು ಮಾಡಲಾಗುವುದು. ಜಿಲ್ಲೆಯಲ್ಲಿಸಿಇಎನ್‌(ಸೈಬರ್‌ ಕ್ರೈಂ-ಎಕನಾಮಿಕ್ಸ್‌-ನಾರ್ಕೊಟಿಕ್‌) ಠಾಣೆಗಳನ್ನೂ ಹೆಚ್ಚಿಸಲಾಗುವುದು.
- ಬಸವರಾಜ ಬೊಮ್ಮಾಯಿ, ಗೃಹ ಸಚಿವ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ