ಆ್ಯಪ್ನಗರ

ವೇದಿಕೆ ಹಂಚಿಕೊಂಡ ಶ್ರೀರಾಮುಲು-ಜಾರಕಿಹೊಳಿ ಬ್ರದರ್ಸ್‌

ಚಳಿಗಾಲದ ಅಧಿವೇಶನದ ಗದ್ದಲದ ನಡುವೆ ವಾಲ್ಮೀಕಿ ಸಮುದಾಯ ನಗರದ ಖಾಸಗಿ ಹೋಟೆಲ್‌ವೊಂದರಲ್ಲಿ ಆಯೋಜಿಸಿದ್ದ ಸಭೆಯಲ್ಲಿ ರಮೇಶ್‌ ಮತ್ತು ಸತೀಶ್‌ ಜಾರಕಿಹೊಳಿ ಸಹೋದರರ ಜತೆಗೆ ಬಿಜೆಪಿಯ ಮಾಜಿ ಸಚಿವ ಶ್ರೀರಾಮುಲು ಭಾಗವಹಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ.

Vijaya Karnataka 22 Dec 2018, 5:00 am
ಬೆಳಗಾವಿ: ಚಳಿಗಾಲದ ಅಧಿವೇಶನದ ಗದ್ದಲದ ನಡುವೆ ವಾಲ್ಮೀಕಿ ಸಮುದಾಯ ನಗರದ ಖಾಸಗಿ ಹೋಟೆಲ್‌ವೊಂದರಲ್ಲಿ ಆಯೋಜಿಸಿದ್ದ ಸಭೆಯಲ್ಲಿ ರಮೇಶ್‌ ಮತ್ತು ಸತೀಶ್‌ ಜಾರಕಿಹೊಳಿ ಸಹೋದರರ ಜತೆಗೆ ಬಿಜೆಪಿಯ ಮಾಜಿ ಸಚಿವ ಶ್ರೀರಾಮುಲು ಭಾಗವಹಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ.
Vijaya Karnataka Web BLG-2112-2-52-21MAHESH3


ಮೈತ್ರಿ ಸರಕಾರದ ವಿರುದ್ಧ ಮುನಿಸಿಕೊಂಡಿರುವ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್‌ ಜಾರಕಿಹೊಳಿ ಬಿಜೆಪಿಯತ್ತ ಮುಖ ಮಾಡಿದ್ದಾರೆ ಎನ್ನುವ ಸಂದರ್ಭದಲ್ಲಿ ಮೂವರು ನಾಯಕರು ಒಂದೇ ವೇದಿಕೆ ಹಂಚಿಕೊಂಡಿದ್ದು ಚರ್ಚೆಯ ತೀವ್ರತೆಯನ್ನು ಇನ್ನಷ್ಟು ಹೆಚ್ಚಿಸಿದೆ.

ದಾವಣಗೆರೆ ಜಿಲ್ಲೆ ರಾಜೇನಹಳ್ಳಿಯ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ಈ ಸಭೆ ಡಿ.17ರಂದು ನಡೆದಿದೆ. ವಾಲ್ಮೀಕಿ ಸಮುದಾಯದಲ್ಲಿ ಶೈಕ್ಷಣಿಕ, ಸಾಮಾಜಿಕ ಜಾಗೃತಿ ಮೂಡಿಸುವ ಉದ್ದೇಶದಿಂದ ಜನವರಿಯಲ್ಲಿ ಸಮಾವೇಶ ಆಯೋಜಿಸುವ ವಿಷಯವಾಗಿ ಸಭೆಯಲ್ಲಿ ಚರ್ಚಿಸಲಾಗಿದೆ. ವಾಲ್ಮೀಕಿ ಸಮುದಾಯದ ಹಿತಕ್ಕಾಗಿ ಪಕ್ಷಾತೀತ ಹೋರಾಟ ನಡೆಸುವ ಅಗತ್ಯವಿದೆ ಎಂದು ಸ್ವಾಮೀಜಿ ಸಲಹೆ ನೀಡಿದ್ದು, ಈ ಮೂವರು ನಾಯಕರು ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ