ಆ್ಯಪ್ನಗರ

ಶ್ರೀ ಬೃಹತ್‌ ಸಿದ್ಧ ಚಕ್ರ ಆರಾಧನಾ ಮಹೋತ್ಸವ ಸಂಪನ್ನ

ಬೆಳಗಾವಿ: ಇಲ್ಲಿನ ಶ್ರೀ ಧರ್ಮನಾಥ ಭವನದಲ್ಲಿ ಸರ್ವರ ಆತ್ಮ ಕಲ್ಯಾಣಾರ್ಥವಾಗಿ ಆಯೋಜಿಸಿದ್ದ ಶ್ರೀ ಬೃಹತ್‌ ಸಿದ್ಧ ಚಕ್ರ ಆರಾಧನಾ ಮಹೋತ್ಸವ ಗುರುವಾರ ...

Vijaya Karnataka 19 Jul 2019, 5:00 am
ಬೆಳಗಾವಿ : ಇಲ್ಲಿನ ಶ್ರೀ ಧರ್ಮನಾಥ ಭವನದಲ್ಲಿ ಸರ್ವರ ಆತ್ಮ ಕಲ್ಯಾಣಾರ್ಥವಾಗಿ ಆಯೋಜಿಸಿದ್ದ ಶ್ರೀ ಬೃಹತ್‌ ಸಿದ್ಧ ಚಕ್ರ ಆರಾಧನಾ ಮಹೋತ್ಸವ ಗುರುವಾರ ಸಂಪನ್ನಗೊಂಡಿತು.
Vijaya Karnataka Web BLG-1807-2-52-18RAJU-9


ಶ್ರೀ ಧರ್ಮನಾಥ ಜಿನಮಂದಿರ ಕಮಿಟಿ ಹಾಗೂ ಸಮ್ಯಕ್ತ್ವ ಮಹಿಳಾ ಮಂಡಳದ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಪೂಜೆಯಲ್ಲಿ ನಗರ ಮತ್ತು ಸುತ್ತಲಿನ ಗ್ರಾಮದ ಶ್ರಾವಕ, ಶ್ರಾವಕಿಯರು ಭಾಗವಹಿಸಿದ್ದರು. ಧರ್ಮ ಧ್ವಜಾರೋಹಣ, ಮಂಗಲಕುಂಭ, ಪ್ರತಿಷ್ಠೆ, ಕಂಕಣ ಬಂಧನ, ಸಿದ್ಧ ಚಕ್ರ ಆರಾಧನೆ, ಸಾಮೂಹಿಕ ಪೂಜೆ, ಜಾಪ್ಯ ಆರತಿ ವಿಸರ್ಜನೆ, ಪಂಚಾಮೃತ ಅಭಿಷೇಕ, ಣಮೋಕಾರ ಮಹಾಮಂತ್ರ, ಸುಪ್ರಭಾತ ಸ್ತೋತ್ರ, ನಿತ್ಯ ವಿಧಿ ಮತ್ತು ಧಾರ್ಮಿಕ ವಿಧಿವಿಧಾನಗಳು ನಡೆದವು.

ಸಮಾರೋಪದಲ್ಲಿ ಡಾ. ಪಾಶ್ರ್ವನಾಥ ಕೆಂಪಣ್ಣವರ ಮಾತನಾಡಿ, ಜೈನರು ಶಾಂತಿಪ್ರಿಯರು, ಅಹಿಂಸಾ ಪರಮೋ ಧರ್ಮ ಎನ್ನುವುದು ಈ ಧರ್ಮದ ತಿರುಳು. ಈ ಧರ್ಮದ ತತ್ವಗಳನ್ನು ಇತರ ಧರ್ಮದವರು ಪಾಲಿಸುತ್ತಿದ್ದಾರೆ ಎಂದರು.

ದಕ್ಷಿಣ ಕನ್ನಡ ಜೈನ ಮೈತ್ರಿಕೂಟದ ಸಂಸ್ಥಾಪಕ ಅಧ್ಯಕ್ಷ ಬಿ. ಗುಣಪಾಲ ಹೆಗ್ಡೆ ಮಾತನಾಡಿ, ಬೃಹತ್‌ ಸಿದ್ಧ ಚಕ್ರ ಆರಾಧನಾ ಮಹೋತ್ಸವದಂಥ ಶ್ರೇಷ್ಠ ಆಚರಣೆಗಳನ್ನು ಜೈನ ಧರ್ಮ ಒಳಗೊಂಡಿದೆ ಎಂದರು. ಮಾಣಿಕಬಾಗ ದಿಗಂಬರ ಜೈನ ಬೋರ್ಡಿಂಗ್‌ ಅಧ್ಯಕ್ಷ ಕೀರ್ತಿ ಕಾಗವಾಡ, ಅಣ್ಣಾಸಾಬ ಚೌಗುಲೆ ದಂಪತಿ, ಕೆ.ಡಿ. ಚೌಗುಲೆ, ಸಮ್ಯಕ್ತ್ವ ಮಹಿಳಾ ಮಂಡಳದ ಅಧ್ಯಕ್ಷೆ ಜಯಶ್ರೀ ಮದನ ಶೆಟ್ಟರ, ಉಪಾಧ್ಯಕ್ಷೆ ರೇವತಿ ಅಡಿಕೆ, ಪದ್ಮಣ್ಣ ಶೆಟ್ಟಿ ಉಪಸ್ಥಿತರಿದ್ದರು. ಸಮ್ಯಕ್ತ್ವ ಮಹಿಳಾ ಮಂಡಳದ ಸದಸ್ಯೆಯರು ಣಮೋಕಾರ ಮಂತ್ರ ಪಠಿಸಿದರು. ರೂಪಾ ಪಾಯಪ್ಪನವರ ಪ್ರಾಸ್ತಾವಿಕ ಮಾತನಾಡಿದರು. ನಿವೃತ್ತ ಪ್ರಾಚಾರ್ಯ ಎಂ. ಅಜಿತಕುಮಾರ ಸ್ವಾಗತಿಸಿ, ನಿರೂಪಿಸಿದರು. ಶೀಲಾ ಪುಣಜಗೌಡ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ