ಆ್ಯಪ್ನಗರ

ಎಸ್ಸೆಸ್ಸೆಲ್ಸಿ: ಪ್ರಥಮ ಸ್ಥಾನ ಪಡೆಯುವ ವಿದ್ಯಾರ್ಥಿನಿಗೆ 1 ಲಕ್ಷ ರೂ. ಬಹುಮಾನ

ಮೂಡಲಗಿ: ಸ್ವಾತಂತ್ರ್ಯ ಹೋರಾಟಗಾರ ದಿ...

Vijaya Karnataka 16 Aug 2018, 5:00 am
ಮೂಡಲಗಿ: ಸ್ವಾತಂತ್ರ್ಯ ಹೋರಾಟಗಾರ ದಿ. ರಾವಜೇಪ್ಪ ಬಾಲಪ್ಪ ಸೋನವಾಲ್ಕರ ಅವರ ಸ್ಮರಣಾರ್ಥ, ಸರಕಾರಿ ಶಾಲೆಯಲ್ಲಿ ಓದಿ ಮೂಡಲಗಿ ವಲಯಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಪ್ರಥಮ ಸ್ಥಾನ ಪಡೆಯುವ ವಿದ್ಯಾರ್ಥಿನಿಗೆ ಪ್ರತಿ ವರ್ಷ 1 ಲಕ್ಷ ರೂ. ಬಹುಮಾನ ನೀಡುವುದಾಗಿ ಪುರಸಭೆ ಮಾಜಿ ಅಧ್ಯಕ್ಷ ಎಸ್‌.ಆರ್‌. ಸೋನವಾಲ್ಕರ ಹೇಳಿದರು.
Vijaya Karnataka Web BEL-15MDL2


ಇಲ್ಲಿಯ ಬಸವ ಮಂಟಪದಲ್ಲಿ ಬುಧವಾರ ನಡೆದ 72ನೇ ಸ್ವಾತಂತ್ರ್ಯೋತ್ಸವ ದಿನದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು. ಇದೇ ವೇಳೆ ಕಳೆದ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 622 ಅಂಕ ಪಡೆದು ಮೂಡಲಗಿ ವಲಯಕ್ಕೆ ಪ್ರಥಮ ಹಾಗೂ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಹುಣಶ್ಯಾಳ (ಪಿ.ವೈ)ದ ಸೌಜನ್ಯ ಶಂಕರ ನೇಸರಗಿಗೆ ಒಂದು ಲಕ್ಷ ರೂ. ಚೆಕ್‌ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ