ಆ್ಯಪ್ನಗರ

ಬೆಳಗಾವಿ ನಗರದಲ್ಲಿ ರಾಜ್ಯಮಟ್ಟದ 'ಕರ್ನಾಟಕ ಕುಸ್ತಿ ಹಬ್ಬ'

ಬೆಳಗಾವಿ: ಗ್ರಾಮೀಣ ಕುಸ್ತಿಪಟುಗಳಿಗೆ ಸೂಕ್ತ ವೇದಿಕೆ ...

Vijaya Karnataka 3 Feb 2019, 5:00 am
ಬೆಳಗಾವಿ : ಗ್ರಾಮೀಣ ಕುಸ್ತಿಪಟುಗಳಿಗೆ ಸೂಕ್ತ ವೇದಿಕೆ ಕಲ್ಪಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಬೆಳಗಾವಿ ನಗರದಲ್ಲಿ ರಾಜ್ಯಮಟ್ಟದ 'ಕರ್ನಾಟಕ ಕುಸ್ತಿ ಹಬ್ಬ' ಆಯೋಜಿಸಲಾಗಿದೆ. ನಾಲ್ಕು ದಿನಗಳ ಕುಸ್ತಿ ಹಬ್ಬಕ್ಕೆ ಫೆ.7ರಂದು ಮಧ್ಯಾಹ್ನ 3 ಗಂಟೆಗೆ ನೆಹರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅರಣ್ಯ ಸಚಿವ ಸತೀಶ್‌ ಜಾರಕಿಹೊಳಿ ಚಾಲನೆ ನೀಡಲಿದ್ದಾರೆ.
Vijaya Karnataka Web BLG-0202-2-52-2 KUSTI


ಜಿಲ್ಲಾಧಿಕಾರಿ ಡಾ.ಎಸ್‌.ಬಿ.ಬೊಮ್ಮನಹಳ್ಳಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು. ''ಮಹಿಳಾ ಮತ್ತು ಪುರುಷರ ವಯಸ್ಸು ಹಾಗೂ ತೂಕದ ಆಧಾರದ ಮೇಲೆ ಒಟ್ಟು ಆರು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿವೆ. ಪಂದ್ಯಾವಳಿಯಲ್ಲಿ ವಿವಿಧ ಜಿಲ್ಲೆಗಳನ್ನು ಪ್ರತಿನಿಧಿಸಿ 750ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸುವ ನಿರೀಕ್ಷೆ ಇದೆ. ಒಟ್ಟು 2 ಕೋಟಿ ರೂ.ಅನುದಾನದಲ್ಲಿ ಪ್ರಶಸ್ತಿ ವಿಜೇತರಿಗೆ ಬಹುಮಾನಕ್ಕಾಗಿಯೇ 85 ಲಕ್ಷ ರೂ.ಮೀಸಲಿರಿಸಲಾಗಿದೆ. ಇನ್ನೂ 75 ಲಕ್ಷ ರೂ. ಹೆಚ್ಚುವರಿ ಅನುದಾನಕ್ಕೂ ಬೇಡಿಕೆ ಸಲ್ಲಿಸಲಾಗಿದೆ. ಕುಸ್ತಿ ಹಬ್ಬಕ್ಕೆ ಬರುವ ಎಲ್ಲ ಕ್ರೀಡಾಪಟುಗಳು ಮತ್ತು ಅತಿಥಿಗಳಿಗೆ ನಗರದಲ್ಲಿ ವಸತಿ, ಊಟ ಮತ್ತು ಸಾರಿಗೆ, ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲಾಗುವುದು'', ಎಂದರು.

ಬುಡಾ ಆಯುಕ್ತ ಪ್ರೀತಂ ನಸಲಾಪುರೆ, ಪಾಲಿಕೆ ವೈದ್ಯಾಧಿಕಾರಿ ಡಾ.ಶಶಿಧರ ನಾಡಗೌಡ, ರಾಜ್ಯ ಭಾರತೀಯ ಶೈಲಿ ಕುಸ್ತಿ ಸಂಘದ ಅಧ್ಯಕ್ಷ ರತನಕುಮಾರ ಮಠಪತಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ವಿಶೇಷ ಸಮಾರೋಪ :
''ಕುಸ್ತಿ ಹಬ್ಬವನ್ನು ಇನ್ನಷ್ಟು ಸ್ಮರಣೀಯವಾಗಿಸುವ ನಿಟ್ಟಿನಲ್ಲಿ ಫೆ.10ರ ಸಮಾರೋಪ ದಿನದಂದು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಪಟುಗಳ ಕುಸ್ತಿ ಪ್ರದರ್ಶನ ಆಯೋಜಿಸಲಾಗಿದೆ. ಅಂದು ಲಕ್ಷಕ್ಕೂ ಹೆಚ್ಚು ಜನರು ಪಂದ್ಯ ವೀಕ್ಷಿಸುವ ನಿರೀಕ್ಷೆ ಇದೆ'', ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಶ್ರೀನಿವಾಸ್‌ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ