ಆ್ಯಪ್ನಗರ

ಭೂ ಸುಧಾರಣೆ ತಿದ್ದುಪಡಿ ಕಾಯಿದೆ ವಾಪಸ್‌ಗೆ ರಾಜ್ಯ ರೈತ ಸಂಘ, ಹಸಿರು ಸೇನೆ ಆಗ್ರಹ

ಬೆಳಗಾವಿ: ಭೂಸುಧಾರಣಾ ತಿದ್ದುಪಡಿ ...

Vijaya Karnataka 22 Jul 2020, 5:00 am
ಬೆಳಗಾವಿ: ಭೂಸುಧಾರಣಾ ತಿದ್ದುಪಡಿ ಕಾಯಿದೆ ವಾಪಸ್‌ ಪಡೆಯುವಂತೆ ಒತ್ತಾಯಿಸಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿ, ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ರವಾನಿಸಿದರು.
Vijaya Karnataka Web 21LBS3_53
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಧರಣಿ ನಡೆಸಿದರು.


1961ರ ಕಾಯಿದೆಯ 79ಎ ಮತ್ತು ಬಿ ಕಲಂಗಳು ಕೃಷಿಯೇತರ ಮೂಲಗಳಿಂದ ಹೆಚ್ಚು ಆದಾಯ ಹೊಂದಿರುವವರು ಹಾಗೂ ಕೈಗಾರಿಕೋದ್ಯಮಿಗಳು ಕೃಷಿ ಭೂಮಿ ಕಬಳಿಸದಂತೆ ರಕ್ಷಣೆ ಒದಗಿಸಲಾಗಿತ್ತು. 79 ಸಿ ಕಲಂ ತಾವು ರೈತರೆಂದು ಪ್ರಮಾಣ ಪತ್ರ ನೀಡದೇ ಜಮೀನು ಖರೀದಿಸುವವರಿಗೆ ದಂಡ ವಿಧಿಸುವ ಅವಕಾಶ ನೀಡಿತ್ತು. 89ನೇ ಕಲಂ ರೈತರಲ್ಲದವರಿಗೆ ಕೃಷಿ ಭೂಮಿ ಮಾರಾಟವನ್ನು ನಿಷೇಧಿಸಲಾಗಿತ್ತು. ಆದರೆ, ಈಚೆಗೆ ರಾಜ್ಯ ಸರಕಾರ ರೈತ ವಿರೋಧಿ ಕಾಯಿದೆ ಜಾರಿಗೆ ತಂದಿದೆ. ಈ ಕಾಯಿದೆಯಿಂದ ಬಂಡವಾಳಶಾಹಿಗಳು ರೈತರ ಭೂಮಿ ಕಬಳಿಸಲು ಅವಕಾಶ ಮಾಡಿಕೊಟ್ಟಿದೆ ಎಂದು ಆರೋಪಿಸಿದರು.

ಕೂಡಲೇ ಕಾರ್ಪೋರೇಟ್‌ ಪರವಾಗಿರುವ ನೂತನ ಭೂಸುಧಾರಣಾ ತಿದ್ದುಪಡಿ ಕಾಯಿದೆ ವಾಪಸ್‌ ಪಡೆಯಬೇಕು. ಜತೆಗೆ ಎಪಿಎಂಸಿ ಕಾಯಿದೆಯೂ ರೈತರಿಗೆ ಮಾರಕವಾಗಿದ್ದು, ಅದನ್ನು ರದ್ದುಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ರೈತ ಮುಖಂಡರಾದ ಚೂನಪ್ಪ ಪೂಜಾರಿ, ಅಶೋಕ ಯಮಕನಮರಡಿ, ರಾಘವೇಂದ್ರ ನಾಯಕ, ಪ್ರಕಾಶ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ