ಖಾನಾಪುರ: ಸ್ಥಳೀಯ ತಾಲೂಕು ಪಂಚಾಯಿತಿಯಿಂದ ಶುಕ್ರವಾರ ನಿಗದಿಯಾಗಿದ್ದ ತಾಪಂ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ರಾಜ್ಯ ಉಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ಧ ಮಂಡಿಸಲಿರುವ ಅವಿಶ್ವಾಸ ಗೊತ್ತುವಳಿಯ ವಿರುದ್ಧ ತಾಪಂ ಅಧ್ಯಕ್ಷೆ ನಂದಾ ಕೊಡಚವಾಡಕರ ನ್ಯಾಯಾಲಯದ ಮೊರೆ ಹೋಗಿದ್ದರಿಂದ ನ್ಯಾಯಾಲಯ ಮುಂದಿನ ಆದೇಶದವರೆಗೆ ಹಾಲಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಅಂಗೀಕರಿಸದಂತೆ ಆದೇಶ ಹೊರಡಿಸಿದೆ ಎಂದು ತಾಪಂ ಇಒ ಲಕ್ಷತ್ರ್ಮಣರಾವ್ ಯಕ್ಕುಂಡಿ ಮಾಹಿತಿ ನೀಡಿದ್ದಾರೆ.
ಅವಿಶ್ವಾಸ ನಿರ್ಣಯಕ್ಕೆ ತಡೆ
ಸ್ಥಳೀಯ ತಾಲೂಕು ಪಂಚಾಯಿತಿಯಿಂದ ಶುಕ್ರವಾರ ನಿಗದಿಯಾಗಿದ್ದ ತಾಪಂ ...
Vijaya Karnataka 28 Sep 2019, 5:00 am