ಆ್ಯಪ್ನಗರ

ಮಾತೃಭಾಷೆ ಶಿಕ್ಷಣದಿಂದ ಪ್ರಾದೇಶಿಕ ಭಾಷೆಗೆ ಬಲ

ಬೆಳಗಾವಿ: ಮಾತೃಭಾಷೆಯಲ್ಲಿ ಶಿಕ್ಷಣ ನೀತಿ ಜಾರಿಗೆ ಬರುವವರೆಗೆ

Vijaya Karnataka 26 Nov 2018, 5:00 am
ಬೆಳಗಾವಿ : ಮಾತೃಭಾಷೆಯಲ್ಲಿ ಶಿಕ್ಷಣ ನೀತಿ ಜಾರಿಗೆ ಬರುವವರೆಗೆ ಜಾಗತೀಕರಣದ ಈ ಯುಗದಲ್ಲಿ ಪ್ರಾದೇಶಿಕ ಭಾಷೆಗಳಿಗೆ ಸಂಕಷ್ಟ ತಪ್ಪಿದ್ದಲ್ಲ. ಇಡೀ ದೇಶದಲ್ಲಿ ಈ ಕುರಿತು ಗಂಭೀರ ಚಿಂತನೆ ನಡೆಯಬೇಕೆಂದು ಹಿರಿಯ ಸಾಹಿತಿ ಅಲ್ಲಮಪ್ರಭು ಬೆಟದೂರು ಹೇಳಿದರು.
Vijaya Karnataka Web BLG-2511-2-52-25RAJU-7


ಇಲ್ಲಿನ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಸಿರಿಗನ್ನಡ ರಾಷ್ಟ್ರೀಯ ಪ್ರತಿಷ್ಠಾನ ರಾಜ್ಯೋತ್ಸವ ನಿಮಿತ್ತ ಭಾನುವಾರ ಸಂಜೆ ಆಯೋಜಿಸಿದ್ದ ಜಾಗತೀಕರಣ ಸಂದರ್ಭದಲ್ಲಿ 'ಕನ್ನಡ ಚಿಂತನೆ' ವಿಷಯ ಕುರಿತ ವಿಶೇಷ ಉಪನ್ಯಾಸ, ಪ್ರಶಸ್ತಿ ಪ್ರದಾನ, ಪುಸ್ತಕ-ಧ್ವನಿ ಸುರುಳಿ ಬಿಡುಗಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಾತೃಭಾಷೆಯಲ್ಲಿಯೇ ರಾಜ್ಯಾಡಳಿತ ನಡೆಯಬೇಕು ಎಂಬುದನ್ನು ಇಡೀ ಜಗತ್ತಿನ ಭಾಷಾ ವಿದ್ವಾಂಸರು ಒಪ್ಪಿಕೊಂಡಿದ್ದರೂ ಅದು ಜಾರಿಗೆ ಬರುತ್ತಿಲ್ಲ. ಇದರಿಂದ ಮಕ್ಕಳ ಬೌದ್ಧಿಕ ಮತ್ತು ವ್ಯಕ್ತಿತ್ವ ವಿಕಸನದ ಮೇಲೂ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ಕಳವಳ ವ್ಯಕ್ತ ಪಡಿಸಿದರು.

ಪೋಷಕರು ಬಹುರಾಷ್ಟ್ರೀಯ ಕಂಪನಿಗಳು ಕೊಡುತ್ತಿರುವ ಲಕ್ಷ ಲಕ್ಷ ರೂಪಾಯಿ ವೇತನದಿಂದಾಗಿ ತಮ್ಮ ಮಕ್ಕಳು ಇಂಗ್ಲಿಷ್‌ ಕಲಿತರೆ ಮಾತ್ರ ಭವಿಷ್ಯ ಇದೆ ಎಂದು ಭಾವಿಸುತ್ತಿದ್ದಾರೆ. ಜಾಗತೀಕರಣದ ಈ ಇಂಗ್ಲಿಷ್‌ ಸೆಳೆತವು ಮಾತೃಭಾಷೆಗಳಿಗೆ ಹೊಡೆತ ನೀಡುತ್ತಿದೆ. ಈ ಹೊಡೆತಕ್ಕೆ ಕೇವಲ ಕನ್ನಡ ಮಾತ್ರ ಸೊರಗುತ್ತಿಲ್ಲ. ದೇಶದ ಎಲ್ಲಾ ಭಾಷೆಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ವಿವರಿಸಿದರು.

ಕನ್ನಡ ಬಹು ಸತ್ವಯುತವಾದ ವವಿಧ್ಯಮಯ ಭಾಷೆಯಾಗಿದೆ. ಕನ್ನಡದಲ್ಲಿಯೇ ಅನೇಕ ಕನ್ನಡಗಳಿವೆ. ಪ್ರದೇಶದಿಂದ ಪ್ರದೇಶಕ್ಕೆ ವಿಶೇಷತೆ ಕಾಯ್ದುಕೊಂಡಿದೆ. ಶಕ್ತಿಯುತ ಸಾಹಿತ್ಯ ರಚಿಸುವ ಸತ್ವ ಈ ಭಾಷೆಗಿದೆ ಎಂದ ಅವರು, ನಮ್ಮ ಮಕ್ಕಳಿಗೆ ಮೂಲಾಕ್ಷ ರಗಳನ್ನು ಗಟ್ಟಿಯಾಗಿ ಕಲಿಸುವ ಮೂಲಕ ಕನ್ನಡವನ್ನು ಗಟ್ಟಿಗೊಳಿಸಬೇಕಾಗಿದೆ ಎಂದರು.

ಮುರುಗೋಡದ ಶ್ರೀ ನೀಲಕಂಠ ಸ್ವಾಮೀಜಿ ಹಾಗೂ ಮುಗಳಖೋಡದ ಮುರುಘರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಂಸದ ಸುರೇಶ ಅಂಗಡಿ ಕಾರ್ಯಕ್ರಮ ಉದ್ಘಾಟಿಸಿದರು. ಮಾಜಿ ಸಚಿವ ಶಶಿಕಾಂತ ನಾಯಕ ಅಧ್ಯಕ್ಷ ತೆ ವಹಿಸಿದ್ದರು.

ಸಿಡಿ ಬಿಡುಗಡೆ, ಪ್ರಶಸ್ತಿ ಪ್ರದಾನ:
ಸಿರಿಗನ್ನಡ ಪ್ರತಿಷ್ಠಾನದ ಮಹಿಳಾ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮೀ ತಿರ್ಲಾಪೂರ ಅವರ ಪುಸ್ತಕ ಮತ್ತು ನಾದಸುಧಾ ಸಂಗೀತ ಶಾಲೆಯ ವಿದ್ಯಾರ್ಥಿಗಳು ಹಾಡಿರುವ ಭಕ್ತಿ ಗೀತೆಗಳ ಸಿಡಿ ಬಿಡುಗಡೆ ಮಾಡಲಾಯಿತು. ವಿವಿಧ ಕ್ಷೇತ್ರಗಳ ಅನೇಕ ಸಾಧಕರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಗೌರವಿಸಲಾಯಿತು.

ಪ್ರತಿಷ್ಠಾನದ ಅಧ್ಯಕ್ಷ ಶಶಿಧರ ಘಿವಾರಿ ಪ್ರಾಸ್ತಾವಿಕ ಮಾತನಾಡಿದರು. ಕುಪ್ಪಸಗೌಡರ ನಿರೂಪಿಸಿದರು. ರುದ್ರಣ್ಣ ಚಂದರಗಿ ವಂದಿಸಿದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಭಾರತದ ರಾಷ್ಟ್ರೀಯ ಭಾಷೆ ಯಾವುದು ಎಂಬುದ ಸ್ಪಷ್ಟವಾಗಿಲ್ಲ. ಹಿಂದಿ ರಾಷ್ಟ್ರೀಯ ಭಾಷೆಯೆಂಬುದು ಎಲ್ಲಿಯೂ ಉಲ್ಲೇಖವಾಗಿಲ್ಲ. ನಮ್ಮ ನೋಟುಗಳ ಮೇಲೆ ಮುದ್ರಿತವಾಗುವ ಎಲ್ಲಾ ಭಾಷೆಗಳು ರಾಷ್ಟ್ರೀಯ ಭಾಷೆಗಳ ಭಾರತ ಬಹು ಭಾಷೆಗಳ ರಾಷ್ಟ್ರವಾಗಿದೆ.
-ಅಲ್ಲಮಪ್ರಭು ಬೆಟದೂರ, ಸಾಹಿತಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ