ಆ್ಯಪ್ನಗರ

ಹೆದ್ದಾರಿ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

ನಾಗರಮುನ್ನೋಳಿ: ಗ್ರಾಮದಿಂದ ಚಿಕ್ಕೋಡಿಗೆ ಸಮಯಕ್ಕೆ ಸರಿಯಾಗಿ ಬಸ್‌ ಬಾರದ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಎಬಿವಿಪಿಯ ರಮೇಶ ಕಾಳನ್ನವರ ನೇತೃತ್ವದಲ್ಲಿ ...

Vijaya Karnataka 15 Jul 2018, 5:00 am
ನಾಗರಮುನ್ನೋಳಿ: ಗ್ರಾಮದಿಂದ ಚಿಕ್ಕೋಡಿಗೆ ಸಮಯಕ್ಕೆ ಸರಿಯಾಗಿ ಬಸ್‌ ಬಾರದ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಎಬಿವಿಪಿಯ ರಮೇಶ ಕಾಳನ್ನವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಿಪ್ಪಾಣಿ -ಮುಧೋಳ ರಾಜ್ಯ ಹೆದ್ದಾರಿ ಬಂದ್‌ ಮಾಡಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಎರಡು ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದರು.
Vijaya Karnataka Web BEL-14NAGARMUNNOLI01


ಗ್ರಾಮದಿಂದ ಚಿಕ್ಕೋಡಿಗೆ ದಿನನಿತ್ಯ ಅಂದಾಜು 200 ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳುತ್ತಾರೆ. ಆ ಸಮಯದಲ್ಲಿ ಸರಿಯಾದ ಸಮಯಕ್ಕೆ ಬಸ್‌ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿ 15 ದಿನಗಳ ಹಿಂದೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಲಾಗಿತ್ತಾದರೂ ಪ್ರಯೋಜನವಾಗಿಲ್ಲ ಎಂದು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಆಕ್ರೋಶಗೊಂಡರು.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಮಧ್ಯಪ್ರವೇಶಿಸಿ ವಿದ್ಯಾರ್ಥಿಗಳ ಮನವೊಲಿಸಿದ ಗ್ರಾಪಂ ಅಧ್ಯಕ್ಷ ಸಿದ್ದಪ್ಪಾ ಮರಾರ‍ಯಯಿ ಸೋಮವಾರದೊಳಗೆ ಬೆಳಗಿನ ಸಮಯದಲ್ಲಿ ಹೆಚ್ಚುವರಿ ಬಸ್‌ ಬಿಡುವಂತೆ ಅಧಿಕಾರಿಗಳಿಗೆ ತಿಳಿಸಿದರು. ಮಾತು ತಪ್ಪಿದರೆ ಸದಸ್ಯರೊಡಗೂಡಿ ವಿದ್ಯಾರ್ಥಿಗಳೊಂದಿಗೆ ಪ್ರತಿಭಟಿಸುವುದಾಗಿ ಎಚ್ಚರಿಸಿದರು.

ಈ ಸಂದರ್ಭದಲ್ಲಿ ಕಾಶಪ್ಪಾ ಗಿಜನ್ನವರ, ಶಿವಾನಂದ ಆಲೂರೆ, ಮಲಿಕಾರ್ಜುನ ಈಟಿ, ಮಲ್ಲಪಾ ಮೈತ್ರಿ, ಸುರೇಶ ಕಾಳನ್ನವರ, ಬಾಬು ಕಾಳನ್ನವರ, ಸುರೇಶ ಜನಮಟ್ಟಿ, ಚನ್ನಬಸು ಮನಗೂಳಿ, ಸಿದ್ದು ಈಟಿ, ರಾಜು ಚೌಹಾಣ,ಮಾಳಪ್ಪಾ ಹೀರೆಕೊಂಡಿ, ಶೀವು ಮರಾರ‍ಯಯಿ, ಮಹಾದೇವ ಪಡೆದ ಹಾಗೂ ನೂರಾರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ