ಆ್ಯಪ್ನಗರ

ಲ್ಯಾಪ್‌ಟಾಪ್‌ ವಿತರಿಸುವಂತೆ ವಿದ್ಯಾರ್ಥಿಗಳ ಪ್ರತಿಭಟನೆ

ಅಥಣಿ: ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ...

Vijaya Karnataka 28 Jan 2020, 5:00 am
ಅಥಣಿ: ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಿಸುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ಅಥಣಿ ಘಟಕದಿಂದ ಸೋಮವಾರ ಪಟ್ಟಣದಲ್ಲಿವಿಜಯಪುರ- ಬೆಳಗಾವಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟಿಸಲಾಯಿತು.
Vijaya Karnataka Web 27-ATHANI-2_53
ಲ್ಯಾಪ್‌ಟಾಪ್‌ ವಿತರಿಸುವಂತೆ ಒತ್ತಾಯಿಸಿ ಎಬಿವಿಪಿ ವತಿಯಿಂದ ಮನವಿ ಸಲ್ಲಿಸಲಾಯಿತು.


ಎಬಿವಿಪಿ ಸಂಚಾಲಕ ಸಚಿನ್‌ ಬಳ್ಳೋಳಿ ಮಾತನಾಡಿ, ರಾಜ್ಯ ಸರಕಾರ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪಟಾಪ್‌ ವಿತರಣೆ ಮಾಡುತ್ತಿದೆ. ಆದರೆ, ಅಥಣಿಯ ಪ್ರಥಮ ದರ್ಜೆ ಕಾಲೇಜಿಗೆ ಇನ್ನೂ ಲ್ಯಾಪ್‌ಟಾಪ್‌ ಬಂದಿಲ್ಲ. ಕಾಲೇಜಿನ ಪ್ರಾಚಾರ್ಯರಿಗೂ ಈ ಕುರಿತು ಮಾಹಿತಿ ಇಲ್ಲ. ಕೂಡಲೇ ಲ್ಯಾಪ್‌ಟಾಪ್‌ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಕುರಿತು ಶಿರಸ್ತೇದಾರ ಎಸ್‌.ಎಂ.ಬಿರಾದಾರ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿಕೆಲ ಸಮಯ ಹೆದ್ದಾರಿ ಸಂಚಾರ ವ್ಯತ್ಯಯವಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ