ಆ್ಯಪ್ನಗರ

ಯಲ್ಲಮ್ಮನ ದರ್ಶನ ಪಡೆದ ಸುಪ್ರೀಂ ಕೋರ್ಟ್‌ ನ್ಯಾಯಾಧೀಶ

ಉಗರಗೋಳ (ಸವದತ್ತಿ): ಶ್ರೀಕ್ಷೇತ್ರ ಯಲ್ಲಮ್ಮನ ಗುಡ್ಡಕ್ಕೆ ಬುಧವಾರ ...

Vijaya Karnataka 31 Oct 2019, 5:00 am
ಉಗರಗೋಳ (ಸವದತ್ತಿ): ಶ್ರೀಕ್ಷೇತ್ರ ಯಲ್ಲಮ್ಮನ ಗುಡ್ಡಕ್ಕೆ ಬುಧವಾರ ಸುಪ್ರೀಂ ಕೋರ್ಟ್‌ ನ್ಯಾಯಾಧೀಶ ದಿನೇಶ ಮಹೇಶ್ವರಿ ಅವರು ಭೇಟಿ ನೀಡಿ ದೇವಿಯ ದರ್ಶನ ಪಡೆದರು.
Vijaya Karnataka Web 30UGL1_53


ಈ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ''ಶ್ರೀಕ್ಷೇತ್ರಕ್ಕೆ ನಾನು ನ್ಯಾಯಾಧೀಶರಾಗಿ ಬಂದಿಲ್ಲ. ಸಾಮಾನ್ಯ ಭಕ್ತನಾಗಿ ಬಂದಿದ್ದೇನೆ. ನಮ್ಮ ಕುಟುಂಬದ ಎಲ್ಲರೂ ಶ್ರೀ ರೇಣುಕಾ ಯಲ್ಲಮ್ಮಾ ದೇವಿಯ ಭಕ್ತರು. ಈ ಭಕ್ತಿ ನಮ್ಮನ್ನು ಉನ್ನತ ಸ್ಥಾನಕ್ಕೆ ಏರಿಸಿದೆ. ಯಲ್ಲಮ್ಮ ದೇವಿಗೆ ಬೆಳ್ಳಿಯ ನಾಗಪ್ಪನ ಮೂರ್ತಿಯನ್ನು ಹರಕೆ ರೂಪದಲ್ಲಿಒಪ್ಪಿಸಿದ್ದೇವೆ'' ಎಂದರು.

ಈ ವೇಳೆ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ, ಬೈಲಹೊಂಗಲ ಎಸಿ ಶಿವಾನಂದ ಬಜಂತ್ರಿ, ಸವದತ್ತಿ ತಹಸೀಲ್ದಾರ ಶಂಕರ ಗೌಡ, ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯ ಎಸ್‌.ಆರ್‌.ಪಾಟೀಲ, ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಜಿರಗಾಳ ಹಾಗೂ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ