ಆ್ಯಪ್ನಗರ

ಶಾರ್ಟ್‌ ಸಕ್ರ್ಯೂಟ್‌ನಿಂದ ಕಬ್ಬು ನಾಶ

ಬೈಲಹೊಂಗಲ: ಸಮೀಪದ ಹೊಸೂರ ಗ್ರಾಮದ ಮದಲಭಾಂವಿ ...

Vijaya Karnataka 3 Nov 2019, 5:00 am
ಬೈಲಹೊಂಗಲ: ಸಮೀಪದ ಹೊಸೂರ ಗ್ರಾಮದ ಮದಲಭಾಂವಿ ಕುಟುಂಬಕ್ಕೆ ಸೇರಿದ ಜಮೀನಿನಲ್ಲಿವಿದ್ಯುತ್‌ ಶಾರ್ಟ್‌ ಸಕ್ರ್ಯೂಟ್‌ ಸಂಭವಿಸಿ ಸುಮಾರು 10 ಲಕ್ಷ ರೂ. ಮೌಲ್ಯದ 6 ಎಕರೆಯಲ್ಲಿನ ಕಬ್ಬು ಬೆಳೆ ಸುಟ್ಟು ಕರಕಲಾಗಿದೆ.
Vijaya Karnataka Web 2HTP9_53


ಸೊಗಲ ಸಮೀಪ ಸರ್ವೇ ನಂ. 26ರಲ್ಲಿಮಲ್ಲಿಕಾರ್ಜುನ ಬಸವಣ್ಣೆಪ್ಪ ಮದಲಭಾಂವಿ, ಈರಪ್ಪ ವೀರಪ್ಪ ಮದಲಭಾಂವಿ ಅವರಿಗೆ ಸೇರಿದ 6 ಎಕರೆ ಜಮೀನದಲ್ಲಿಕಟಾವಿಗೆ ಬಂದಿದ್ದ ಕಬ್ಬು ಬೆಳೆ ಶಾಟ್‌ ಸಕ್ರ್ಯೂಟ್‌ದಿಂದ ನಾಶವಾಗಿದೆ. ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಘಟನಾ ಸ್ಥಳಕ್ಕೆ ಕಂದಾಯ ಇಲಾಖೆ ಹಾಗೂ ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಾನಿಗೀಡಾದ ಕುಟುಂಬಕ್ಕೆ ಸರಕಾರ ಪರಿಹಾರ ಧನ ವಿತರಿಸಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ. ಸವದತ್ತಿ ಪೊಲೀಸ್‌ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ