ಆ್ಯಪ್ನಗರ

ಅನರ್ಹ ಶಾಸಕರ ಕ್ಷೇತ್ರದ ಸಂತ್ರಸ್ತರಿಗೆ ಸೂಕ್ತ ವ್ಯವಸ್ಥೆ

ಗೋಕಾಕ: ''ಬೆಳಗಾವಿ ಜಿಲ್ಲೆಯ ಅಥಣಿ, ಕಾಗವಾಡ, ಗೋಕಾಕ ಕ್ಷೇತ್ರಗಳ ಮೂವರೂ ...

Vijaya Karnataka 14 Aug 2019, 5:00 am
ಗೋಕಾಕ: ''ಬೆಳಗಾವಿ ಜಿಲ್ಲೆಯ ಅಥಣಿ, ಕಾಗವಾಡ, ಗೋಕಾಕ ಕ್ಷೇತ್ರಗಳ ಮೂವರೂ ಅನರ್ಹ ಶಾಸಕರೊಂದಿಗೆ ಶೀಘ್ರ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಅವರ ಕ್ಷೇತ್ರದ ನೆರೆ ಹಾವಳಿ ಪ್ರದೇಶದಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಲು ಕೋರಲಾಗುವುದು'' ಎಂದು ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
Vijaya Karnataka Web suitable arrangements for victims of ineligible legislators
ಅನರ್ಹ ಶಾಸಕರ ಕ್ಷೇತ್ರದ ಸಂತ್ರಸ್ತರಿಗೆ ಸೂಕ್ತ ವ್ಯವಸ್ಥೆ


ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಪ್ರವಾಹದಿಂದ ಗೋಕಾಕ ಹಾಗೂ ಮೂಡಲಗಿ ತಾಲೂಕಿನಲ್ಲಿ ಅಪಾರ ಹಾನಿಯಾಗಿದ್ದು, ಅಧಿಕಾರಿಗಳ ಸಭೆ ನಡೆಸಿ ಸಂತ್ರಸ್ತರಿಗೆ ಪರಿಹಾರ ದೊರಕಿಸುವಂತೆ ಸೂಚಿಸಲಾಗಿದೆ. ಶಾಸಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಂತ್ರಸ್ತರ ಕಾಳಜಿ ತೆಗೆದುಕೊಳ್ಳುತ್ತಿದ್ದಾರೆ. ಅದೇ ರೀತಿ ಸಹೋದರ ರಮೇಶ್‌ ಜಾರಕಿಹೊಳಿ ಕೂಡ ಕ್ಷೇತ್ರದಲ್ಲಿ ಸಂಚರಿಸಿ ಸಂತ್ರಸ್ತರಿಗೆ ಪರಿಹಾರ ದೊರಕಿಸಲು ಪ್ರಯತ್ನಿಸುತ್ತಿದ್ದಾರೆ'' ಎಂದರು.

ಅತ್ರಪ್ತರು ಅನರ್ಹರಾಗಿ ಈಗ ಅತಂತ್ರರಾಗಿದ್ದು, ಇದರಿಂದ ಸಂಪುಟ ವಿಸ್ತರಣೆ ವಿಳಂಬವಾಗಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಬಾಲಚಂದ್ರ, ''ಅನರ್ಹ ಶಾಸಕರು ನಮ್ಮ ಪಕ್ಷ ಕ್ಕೆ ಬಂದಿಲ್ಲ. ಸುಪ್ರೀಂ ಕೋರ್ಟ್‌ ಆದೇಶದ ನಂತರ ಅವರು ಏನು ಮಾಡುತ್ತಾರೆ ನೋಡೋಣ. ಸಚಿವ ಸಂಪುಟ ವಿಸ್ತರಣೆಗೆ ಅನರ್ಹ ಶಾಸಕರ ಪ್ರಕರಣ ಅಡ್ಡಿಯಾಗಿಲ್ಲ. ಈ ಬಗ್ಗೆ ವರಿಷ್ಠರು ಶೀಘ್ರ ನಿರ್ಧಾರ ತೆಗೆದುಕೊಳ್ಳುತ್ತಾರೆ. ಅನರ್ಹ ಶಾಸಕರ ವಿರುದ್ಧ ಅಂದಿನ ಸ್ಪೀಕರ್‌ ರಮೇಶ್‌ಕುಮಾರ ಹತ್ತಿರ ಯಾವುದೇ ಸಾಕ್ಷಿಗಳಿಲ್ಲ. ಹಾಗಾಗಿ ಸುಪ್ರೀಂ ಕೋರ್ಟ್‌ನಲ್ಲಿ ಅನರ್ಹ ಶಾಸಕರ ಪರ ತೀರ್ಪು ಬರಬಹುದು'' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ