ಆ್ಯಪ್ನಗರ

ಸುಳೇಬಾವಿ ವ್ಯಕ್ತಿ ಕೊಲೆ; ಮೂವರು ಆರೋಪಿಗಳ ಬಂಧನ

ಬೆಳಗಾವಿ: ತಾಲೂಕಿನ ಸುಳೇಬಾವಿ ಗ್ರಾಮದ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿದ ಪ್ರಕರಣಕ್ಕೆ ...

Vijaya Karnataka 11 Jan 2019, 5:00 am
ಬೆಳಗಾವಿ: ತಾಲೂಕಿನ ಸುಳೇಬಾವಿ ಗ್ರಾಮದ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Vijaya Karnataka Web sulebavi persons murder case three arrested
ಸುಳೇಬಾವಿ ವ್ಯಕ್ತಿ ಕೊಲೆ; ಮೂವರು ಆರೋಪಿಗಳ ಬಂಧನ


ಸುಳೇಬಾವಿ ಗ್ರಾಮದ ಯಲ್ಲೇಶ ಮಹಾದೇವ ತಾನುಗೋಳ (24), ರಾಘವೇಂದ್ರ ತುಕಾರಾಮ ಕಮ್ಮಾರ (23) ಮತ್ತು ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದ ರಾಘವೇಂದ್ರ ಅದೃಶಪ್ಪ ದಾನಪ್ಪನವರ (23) ಬಂಧಿತ ಆರೋಪಿಗಳು. ಜ.1ರಂದು ಬೆಳಗಾವಿ ತಾಲೂಕಿನ ಹೊನ್ನಿಹಾಳ ಗ್ರಾಮದಲ್ಲಿ ನಾಗೇಂದ್ರ ಬಸಪ್ಪ ಮ್ಯಾಕಲ್ಯಾಗೋಳ ಎಂಬುವವರನ್ನು ಕೊಲೆ ಮಾಡಲಾಗಿತ್ತು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಮಾರಿಹಾಳ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದರು.

ವೈಯಕ್ತಿಕ ದ್ವೇಶದ ಕಾರಣದಿಂದ ಸುಳೇಬಾವಿ ಗ್ರಾಮದ ಕಲ್ಮೇಶ್ವರ ನಗರದ ಮಹೇಶ ಉರ್ಫ್‌ ರಣಧೀರ ರಾಮಚಂದ್ರ ಮುರಾರಿ ಎನ್ನುವ ವ್ಯಕ್ತಿ ನಾಗೇಂದ್ರ ಅವರನ್ನು ಕೊಲೆ ಮಾಡಿ, ಪರಾರಿಯಾಗಿರುವುದು ತನಿಖೆ ವೇಳೆ ಗೊತ್ತಾಗಿದೆ. ಪ್ರಕರಣದ ಪ್ರಮುಖ ಆರೋಪಿಯಾಗಿದ್ದು ಶೋಧ ಕಾರ‍್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾರಿಹಾಳ ಠಾಣೆ ಇನ್‌ಸ್ಪೆಕ್ಟರ್‌ ವಿಜಯಕುಮಾರ ಸಿನ್ನೂರ ಮತ್ತು ತಂಡ ತನಿಖೆ ಕೈಗೊಂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ