ಆ್ಯಪ್ನಗರ

ನೇಕಾರ ಮುಖಂಡರಿಂದ ತಹಸೀಲ್ದಾರ್‌ಗೆ ತರಾಟೆ

ರಾಮದುರ್ಗ: ಏ.10ರಂದು ವಚನಕಾರ ಶ್ರೀ ದೇವರ ದಾಸಿಮಯ್ಯನವರ ಜಯಂತ್ಯುತ್ಸವ ಆಚರಿಸುವಂತೆ ...

Vijaya Karnataka 10 Apr 2019, 5:00 am
ರಾಮದುರ್ಗ : ಏ.10ರಂದು ವಚನಕಾರ ಶ್ರೀ ದೇವರ ದಾಸಿಮಯ್ಯನವರ ಜಯಂತ್ಯುತ್ಸವ ಆಚರಿಸುವಂತೆ ಸರಕಾರ ಆದೇಶ ಹೊರಡಿಸಿದ್ದರೂ ಮಾರ್ಚ್‌ 22ರಂದೇ ಆಚರಿಸಿರುವುದಕ್ಕೆ ರಾಮದುರ್ಗದ ನೇಕಾರ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
Vijaya Karnataka Web BEL-09RD2


ಮಂಗಳವಾರ ಮಿನಿ ವಿಧಾನಸೌಧಕ್ಕೆ ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ನೇಕಾರ ಮುಖಂಡರು ತಹಸೀಲ್ದಾರ ಬಸನಗೌಡ ಕೋಟೂರ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಈ ಕುರಿತು ತಮ್ಮ ತಪ್ಪಿಗೆ ಕ್ಷ ಮೆ ಕೇಳಿದ ತಹಸೀಲ್ದಾರರು, ''ಇನ್ನು ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇನೆ. ಯಾವುದೇ ತಾರತಮ್ಯ ಮಾಡುವುದಿಲ್ಲ'' ಎಂದರು.

ಲೋಕಸಭೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಏ.10ರಂದು ಮಿನಿ ವಿಧಾನಸೌಧದಲ್ಲಿ ಸರಳ ರೀತಿಯಲ್ಲಿ ದೇವರ ದಾಸಿಮಯ್ಯನವರ ಜಯಂತ್ಯುತ್ಸವ ಆಚರಿಸಲಾಗುವುದು. ಇದಕ್ಕೆ ಸಮಾಜದವರು ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ತಾಲೂಕು ದೇವಾಂಗ ಸಮಾಜದ ಅಧ್ಯಕ್ಷ ಅಶೋಕ ಸೂಳಿಬಾವಿ, ಬನಶಂಕರಿ ದೇವಾಂಗ ಸಮಾಜದ ಅಧ್ಯಕ್ಷ ವಿಠ್ಠಲ ಮುರುಡಿ, ರಾಜ್ಯ ದೇವಾಂಗ ಸಂಘದ ಉಪಾಧ್ಯಕ್ಷ ಶಂಕ್ರಣ್ಣ ಮುರುಡಿ, ಕುಬೇರ ಗರಡಿಮನಿ, ನಾರಾಯಣ ಹೂಲಿ, ದುರ್ವಾಸಪ್ಪ ಹೆಬ್ಬಳ್ಳಿ, ನಾರಾಯಣ ಬೆನ್ನೂರ, ಈರಣ್ಣ ಶಿದ್ಲ್ಯಾಳಿ, ಜೀವಪ್ಪ ಬೆನ್ನೂರ ಇತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ