ಆ್ಯಪ್ನಗರ

ಸಣ್ಣ ಕೈಗಾರಿಕೆ ನಿಗಮದ ಯೋಜನೆ ಸದುಪಯೋಗಿಸಿಕೊಳ್ಳಿ

ಬೆಳಗಾವಿ: ಎನ್‌ಎಸ್‌ಐಸಿ ರಾಷ್ಟ್ರೀಯ ಸಣ್ಣ ಕೈಗಾರಿಕೆ ನಿಗಮದಿಂದ ಸಾಕಷ್ಟು ಯೋಜನೆಗಳು ಜಾರಿಯಲ್ಲಿವೆ...

Vijaya Karnataka 8 Jan 2019, 5:00 am
ಬೆಳಗಾವಿ : ಎನ್‌ಎಸ್‌ಐಸಿ ರಾಷ್ಟ್ರೀಯ ಸಣ್ಣ ಕೈಗಾರಿಕೆ ನಿಗಮದಿಂದ ಸಾಕಷ್ಟು ಯೋಜನೆಗಳು ಜಾರಿಯಲ್ಲಿವೆ. ಆದರೂ, ಬಹಳಷ್ಟು ಜನರು ಯೋಜನೆಗಳ ಲಾಭ ಪಡೆದುಕೊಳ್ಳಲು ಮುಂದೆ ಬರುತ್ತಿಲ್ಲ ಎಂದು ಎನ್‌ಎಸ್‌ಐಸಿ ವಲಯ ಮುಖ್ಯ ಪ್ರಧಾನ ವ್ಯವಸ್ಥಾಪಕ ಪಿ. ರವಿಕುಮಾರ್‌ ಹೇಳಿದರು.
Vijaya Karnataka Web BEL-7 LBS 14


ನಗರದ ಉದ್ಯಮಬಾಗದ ಫೌಂಡರಿ ಕ್ಲಸ್ಟರ್‌ ಅಡಿಟೋರಿಯಂನಲ್ಲಿ ಸೋಮವಾರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ, ಜಿಲ್ಲಾ ಕೈಗಾರಿಕಾ ಕೇಂದ್ರ, ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘ, ಹೊನಗಾ ಸಣ್ಣ ಕೈಗಾರಿಕೆಗಳ ಸಂಘಗಳ ಸಹಯೋಗದಲ್ಲಿ ಆಯೋಜಿಸಿದ್ದ ಸುಗಮ ವಾಣಿಜ್ಯ-ವ್ಯವಹಾರ ನಡೆಸುವಿಕೆಗಾಗಿ ಸಲಹೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರಕಾರಗಳು ಹಲವು ಯೋಜನೆಗಳ ಮೂಲಕ ಅನುದಾನವನ್ನು ಒದಗಿಸುತ್ತಿವೆ. ಆದ್ದರಿಂದ ವೈಯಕ್ತಿಕ ಮತ್ತು ಸಂಘಟನೆಗಳಿಂದ ಅರ್ಜಿ ಸಲ್ಲಿಸಿ ಲಾಭ ಪಡೆಯಬಹುದು ಎಂದರು.

ಕಾಸಿಯಾ ಅಧ್ಯಕ್ಷ ಬಸವರಾಜ ಜವಳಿ ಮಾತನಾಡಿ, ಸರಕಾರದಿಂದ ಯೋಜನೆ ಪಡೆಯುವಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಆದರೆ, ಈಗ ಆನ್‌ಲೈನ್‌ ಮೂಲಕ ಯೋಜನೆಗಳ ಲಾಭ ಸೇರಿದಂತೆ ಅರ್ಜಿ ಸಲ್ಲಿಸಲು ಅವಕಾಶ ನೀಡಿರುವುದರಿಂದ ಸರಳೀಕರಣಗೊಂಡಿದೆ. ಯೋಜನೆಯ ಎಲ್ಲ ಮಾಹಿತಿ ಆನ್‌ಲೈನ್‌ನಲ್ಲಿ ಸಿಗುತ್ತಿದೆ ಎಂದರು.

ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ದೊಡ್ಡಬಸವರಾಜು ಮಾತನಾಡಿ, 2014ರಿಂದ 2019ರ ಕೈಗಾರಿಕಾ ನೀತಿ ಕುರಿತು ಮಾಹಿತಿ ನೀಡಿದರು. ಸುಗಮ ವಾಣಿಜ್ಯ-ವ್ಯವಹಾರ ನಡೆಸುವಿಕೆಗಾಗಿ ಸಲಹೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಜಿಲ್ಲೆಯ 160 ಉದ್ಯಮಿಗಳು ಭಾಗವಹಿಸಿದರು.

ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ರೋಹನ್‌ ಜವಳಿ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ