ಆ್ಯಪ್ನಗರ

ಗೋವು, ಒಂಟೆ ಅಕ್ರಮ ಸಾಗಣೆ ತಡೆಗೆ ತಂಡ ರಚನೆ

ಬೆಳಗಾವಿ: ಒಂಟೆ ಹಾಗೂ ಗೋವುಗಳ ಅನಧಿಕೃತ ಸಾಗಣೆ ಮತ್ತು ವಧೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್‌...

Vijaya Karnataka 14 Aug 2018, 5:00 am
ಬೆಳಗಾವಿ: ಒಂಟೆ ಹಾಗೂ ಗೋವುಗಳ ಅನಧಿಕೃತ ಸಾಗಣೆ ಮತ್ತು ವಧೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್‌.ಜಿಯಾವುಲ್ಲಾ ಸೂಚಿಸಿದ್ದಾರೆ.
Vijaya Karnataka Web BEL-13 LBS 11


ಅಕ್ರಮ ಸಾಗಣೆ ಹಾಗೂ ವಧೆ ತಡೆಗಟ್ಟುವ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸಭೆಯ ಅಧ್ಯಕ್ಷ ತೆ ವಹಿಸಿ ಅವರು ಮಾತನಾಡಿದರು. ಬಕ್ರೀದ್‌ ಹಬ್ಬದ ಸಂದರ್ಭದಲ್ಲಿ ಒಂಟೆ ಹಾಗೂ ಗೋವುಗಳ ವಧೆ ನಡೆಯುವ ಬಗ್ಗೆ ದೂರುಗಳು ಬರುವುದರಿಂದ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಗಮನ ಹರಿಸಬೇಕು. ಪ್ರಾಣಿಗಳ ಹಿಂಸಾಚಾರ ಹಾಗೂ ಅನಧಿಕೃತ ವಧೆಯಿಂದ ಕಾನೂನಿನ ಉಲ್ಲಂಘನೆಯಾಗುತ್ತದೆ. ಯಾರಾದರೂ ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಬಕ್ರೀದ್‌ ಸಂದರ್ಭದಲ್ಲಿ ಪ್ರಾಣಿ ವಧೆ ತಡೆಗಟ್ಟಲು ಬೆಳಗಾವಿ ಮಹಾನಗರ ಪೊಲೀಸ್‌ ಆಯುಕ್ತರು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು, ಪಶುಪಾಲನೆ ಮತ್ತು ಪಶು ವೈದ್ಯಕೀಯ, ಸಾರಿಗೆ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳನ್ನು ಒಳಗೊಂಡ ತಂಡಗಳನ್ನು ರಚಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪಶುಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆ ಉಪನಿರ್ದೇಶಕ ಡಾ. ಡಿ.ಎಸ್‌. ಹವಾಲ್ದಾರ ಮಾತನಾಡಿ, ಜಿಲ್ಲೆಯಲ್ಲಿ ಯಾವುದೇ ಅಧಿಕೃತ ಕಸಾಯಿಖಾನೆ ಅಥವಾ ವಧಾಗಾರ ಇಲ್ಲದಿರುವುದರಿಂದ ಬಕ್ರೀದ್‌ ಮತ್ತಿತರ ಹಬ್ಬಗಳ ಸಂದರ್ಭಗಳಲ್ಲಿ ಪ್ರಾಣಿಗಳ ಅನಧಿಕೃತ ಸಾಗಣೆ ಮತ್ತು ವಧೆ ತಡೆಗಟ್ಟುವುದು ಕಷ್ಟವಾಗುತ್ತಿದೆ ಎಂದರು.

ಜಿಲ್ಲಾ ನಗಾರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಡಾ.ಪ್ರವೀಣ ಬಾಗೇವಾಡಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಾನಂದ ಮಗದುಮ್‌ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ