ಆ್ಯಪ್ನಗರ

ಖಂಜರ್‌ ಗಲ್ಲಿಯಲ್ಲಿ ಬಾಟಲ್‌ ಎಸೆದ ಕಿಡಿಗೇಡಿಗಳು; ಆತಂಕ

ಬೆಳಗಾವಿಯ ಖಂಜರ್‌ ಗಲ್ಲಿಯಲ್ಲಿ ಗುರುವಾರ ತಡರಾತ್ರಿ ಕಿಡಿಗೇಡಿಗಳು ಬಾಟಲ್‌ ಎಸೆದು ಆತಂಕದ ವಾತಾವರಣ ನಿರ್ಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಸಿಪಿ ಸೀಮಾ ಲಾಟ್ಕರ್‌ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Vijaya Karnataka 24 Nov 2018, 5:00 am
ಬೆಳಗಾವಿ: ನಗರದ ಖಂಜರ್‌ ಗಲ್ಲಿಯಲ್ಲಿ ಗುರುವಾರ ತಡರಾತ್ರಿ ಕಿಡಿಗೇಡಿಗಳು ಬಾಟಲ್‌ ಎಸೆದು ಆತಂಕದ ವಾತಾವರಣ ನಿರ್ಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಸಿಪಿ ಸೀಮಾ ಲಾಟ್ಕರ್‌ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Vijaya Karnataka Web BLG-2311-2-52-23MAHESH7


ಗುರುವಾರ ತಡರಾತ್ರಿ ಖಂಜರ್‌ ಗಲ್ಲಿ ಪ್ರದೇಶದಲ್ಲಿ ಕಿಡಿಗೇಡಿಗಳು ಏಕಾಏಕಿ ಗಾಜಿನ ಬಾಟಲಿ ಎಸೆದು ಪರಾರಿಯಾಗಿದ್ದರು. ಇದರಿಂದ ಕೆಲ ಕಾಲ ಬಡಕಲ್‌ ಗಲ್ಲಿ, ಜಾಲಗಾರ ಗಲ್ಲಿ, ಖಂಜರ್‌ ಗಲ್ಲಿ, ಶೆಟ್ಟಿ ಗಲ್ಲಿ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಆತಂಕದ ವಾತಾವರಣ ನಿರ್ಮಾಣಗೊಂಡಿತ್ತು.

ವಿಷಯ ತಿಳಿಯುತ್ತಿದ್ದಂತೆ ಮಾರ್ಕೆಟ್‌ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದರು. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್‌ ಸಿಬ್ಬಂದಿ ನಿಯೋಜಿಸಿ ಬಂದೋಬಸ್ತ್‌ ಕೈಗೊಂಡಿದ್ದರು. ಶುಕ್ರವಾರ ಸಂಜೆ ಸ್ವತಃ ಡಿಸಿಪಿ ಸೀಮಾ ಲಾಟ್ಕರ್‌ ಕೂಡ ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದು, ಸಿಸಿ ಕ್ಯಾಮರಾ ದಾಖಲೆಗಳ ಆಧಾರ ಮೇಲೆ ಕಿಡಿಗೇಡಿಗಳನ್ನು ಬಂಧಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ