ಆ್ಯಪ್ನಗರ

ಚುನಾವಣೆ ಕೆಲಸದಲ್ಲಿ ನಿರ್ಲಕ್ಷ ್ಯ ತೋರಿದರೆ ಕ್ರಮ

ಬೆಳಗಾವಿ : ಚುನಾವಣೆ ಕೆಲಸ ನೇಮಕಗೊಂಡಿರುವ ಎಲ್ಲ ಪೊಲೀಸ್‌ ಸಿಬ್ಬಂದಿ ನಿಷ್ಪಕ್ಷಪಾತವಾಗಿ ಕೆಲಸ ...

Vijaya Karnataka 22 Apr 2019, 5:00 am
ಬೆಳಗಾವಿ : ಚುನಾವಣೆ ಕೆಲಸ ನೇಮಕಗೊಂಡಿರುವ ಎಲ್ಲ ಪೊಲೀಸ್‌ ಸಿಬ್ಬಂದಿ ನಿಷ್ಪಕ್ಷಪಾತವಾಗಿ ಕೆಲಸ ನಿರ್ವಹಿಸಬೇಕು. ಯಾವುದೇ ರೀತಿಯ ಲೋಪ ಕಂಡು ಬಂದಲ್ಲಿ ಕ್ರಮಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಸೀಮಾ ಲಾಟ್ಕರ್‌ ಎಚ್ಚರಿಕೆ ನೀಡಿದರು.
Vijaya Karnataka Web BEL-21 LBS 10


ನಗರದ ಪೊಲೀಸ್‌ ಮೈದಾನದಲ್ಲಿ ಭಾನುವಾರ ಮತದಾನ ಕೇಂದ್ರಗಳಿಗೆ ನಿಯೋಜಿಸಿರುವ ಭದ್ರತಾ ಸಿಬ್ಬಂದಿಯ ಪರೇಡ್‌ ನಡೆಸಿ ಅವರು ಮಾತನಾಡಿದರು. ಮೂರು ಕೆಎಸ್‌ಆರ್‌ಪಿ ತುಕಡಿ, 10 ಸಿಎಆರ್‌ ತುಕಡಿ, ಸಿಐಎಸ್‌ಎಫ್‌ ಮತ್ತು ಬಿಎಸ್‌ಎಫ್‌ ಸಿಬ್ಬಂದಿ, 6 ಎಸಿಪಿ, 16 ಪಿಐ, 1393 ಎಎಸ್‌ಐ ಮತ್ತು ಪೇದೆಗಳು ಸೇರಿದಂತೆ ಒಟ್ಟು 1,433 ಭದ್ರತಾ ಸಿಬ್ಬಂದಿಯನ್ನು ಚುನಾವಣೆ ಕೆಲಸಕ್ಕೆ ನೇಮಿಸಲಾಗಿದೆ ಎಂದರು.

ಮತಗಟ್ಟೆಗಳಿಗೆ ನಿಯೋಜಿಸಲಾದ ಭದ್ರತಾ ಸಿಬ್ಬಂದಿ ಏ.22ರಂದು ಬೆಳಗ್ಗೆ 8 ಗಂಟೆಗೆ ಮಸ್ಟರಿಂಗ್‌ ಕೇಂದ್ರದಲ್ಲಿ ಹಾಜರಿರಬೇಕು. ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಮತಗಟ್ಟೆ ಕೇಂದ್ರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕು. ಮತದಾನ ಕೇಂದ್ರದ ಸುತ್ತಮುತ್ತ ಗುಂಪು ಸೇರಲು ಅವಕಾಶ ನೀಡಬಾರದು. ಮತಗಟ್ಟೆ ಕೇಂದ್ರದಿಂದ 100 ಮೀಟರ್‌ ವ್ಯಾಪ್ತಿಯಲ್ಲಿ ಯಾವುದೇ ಪಕ್ಷಗಳಿಂದ ಚುನಾವಣಾ ಪ್ರಕ್ರಿಯೆ ನಡೆಯದಂತೆ ನೋಡಿಕೊಳ್ಳಬೇಕು. ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಬೇಜವಾಬ್ದಾರಿ ತೋರಿಸಿದರೆ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ