ಆ್ಯಪ್ನಗರ

ಈಜಲು ಹೋಗಿ ಬಾಲಕ ಸಾವು

ತಾಲೂಕಿನ ಹಾಲಗಾ ಗ್ರಾಮದ ಬಳಿ ಕಲ್ಲಿನ ಕ್ವಾರಿಗೆ ಮಂಗಳವಾರ ಮಧ್ಯಾಹ್ನ ಈಜಲು ಹೋಗಿದ್ದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ...

Vijaya Karnataka 17 Apr 2019, 5:00 am
ಬೆಳಗಾವಿ: ತಾಲೂಕಿನ ಹಾಲಗಾ ಗ್ರಾಮದ ಬಳಿ ಕಲ್ಲಿನ ಕ್ವಾರಿಗೆ ಮಂಗಳವಾರ ಮಧ್ಯಾಹ್ನ ಈಜಲು ಹೋಗಿದ್ದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಮೂಲತಃ ಹುಕ್ಕೇರಿ ತಾಲೂಕಿನ ಗೌರವಾಡ ಗ್ರಾಮದ ಬಸಯ್ಯ ಗುರುಸಿದ್ದ ಮಠದ (13) ಮೃತ ಬಾಲಕ.
Vijaya Karnataka Web BLG-1604-2-52-16KWARI


ಬೆಳಗಾವಿ ನಗರದ ಟಿಳಕ ಚೌಕ್‌ದಲ್ಲಿ ವಾಸವಾಗಿದ್ದ ಬಾಲಕ ಈಜಲೆಂದು ಹಾಲಗಾ ಗ್ರಾಮ ಬಳಿಯ ಕಲ್ಲಿನ ಕ್ವಾರಿಗೆ ಇಳಿದಾಗ ಸಾವು ಸಂಭವಿಸಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಈಜು ತಜ್ಞರು ಮತ್ತು ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಮೃತ ದೇಹವನ್ನು ಪತ್ತೆ ಹಚ್ಚಿ ಹೊರ ತೆಗೆದಿದ್ದಾರೆ. ಈ ಕುರಿತು ಹಿರೇಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ