ಈಜಲು ತೆರಳಿದ ಬಾಲಕ ನೀರುಪಾಲು
ಚಿಕ್ಕೋಡಿ: ನಿಪ್ಪಾಣಿ ತಾಲೂಕಿನ ಶಿರದವಾಡ ಗ್ರಾಮದಲ್ಲಿ ದೂಧಗಂಗಾ ನದಿಯಲ್ಲಿ ಶನಿವಾರ ಈಜಲು ...
Vijaya Karnataka 14 Jul 2019, 5:00 am
ಚಿಕ್ಕೋಡಿ : ನಿಪ್ಪಾಣಿ ತಾಲೂಕಿನ ಶಿರದವಾಡ ಗ್ರಾಮದಲ್ಲಿ ದೂಧಗಂಗಾ ನದಿಯಲ್ಲಿ ಶನಿವಾರ ಈಜಲು ತೆರಳಿದ್ದ ಬಾಲಕನೊಬ್ಬ ನೀರುಪಾಲಾಗಿದ್ದಾನೆ.
ಗ್ರಾಮದ ಸಂಗ್ರಾಮ ಸಾಗರ ಪವಾರ(14) ನೀರು ಪಾಲಾದವ. ನದಿಯಲ್ಲಿ ನೀರಿನ ಸೆಳವು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಈತ ಈಜಲು ಹೋದಾಗ ಈ ಅವಘಡ ಸಂಭವಿಸಿದೆ. ಬಾಲಕನಿಗಾಗಿ ಅಗ್ನಿಶಾಮಕ ದಳದವರು ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಸದಲಗಾ ಪಿಎಸ್ಐ ಸಂಗಮೇಶ ದಿಡಿಗಿನಾಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನದಿಗಳ ಮಟ್ಟ ಏರಿಕೆ: ತಾಲೂಕು ಸೇರಿದಂತೆ ನೆರೆಯ ಮಹಾರಾಷ್ಟ್ರದಲ್ಲಿ ಶನಿವಾರ ಮಳೆಯ ಅಬ್ಬರ ಸ್ವಲ್ಪ ಕಡಿಮೆಯಾಗಿದೆ. ಆದರೂ ಕೃಷ್ಣೆಯ ಉಗಮ ಸ್ಥಾನ ಮಹಾಬಳೇಶ್ವರ ಸೇರಿದಂತೆ ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಸಾಧಾರಣ ಮಳೆ ಮುಂದುವರಿದಿದ್ದರಿಂದ ಕೃಷ್ಣಾ ಹಾಗೂ ಉಪನದಿಗಳ ನೀರಿನ ಮಟ್ಟದಲ್ಲಿ ಮತ್ತಷ್ಟು ಏರಿಕೆ ಕಂಡು ಬಂದಿದೆ.
ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್ ಮುಖಾಂತರ ಕೃಷ್ಣಾ ನದಿಗೆ 1,03,797 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಹಿಪ್ಪರಗಿ ಬ್ಯಾರೇಜ್ನಿಂದ 93500 ಕ್ಯೂಸೆಕ್ ನೀರನ್ನು ಹೊರಗೆ ಹರಿ ಬಿಡಲಾಗುತ್ತಿದೆ. ತಾಲೂಕಿನ ಜಲಾವೃತ ಕೆಳಹಂತದ ಆರು ಸೇತುವೆಗಳು ಅದೇ ಸ್ಥಿತಿಯಲ್ಲಿವೆ.
ಗ್ರಾಮದ ಸಂಗ್ರಾಮ ಸಾಗರ ಪವಾರ(14) ನೀರು ಪಾಲಾದವ. ನದಿಯಲ್ಲಿ ನೀರಿನ ಸೆಳವು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಈತ ಈಜಲು ಹೋದಾಗ ಈ ಅವಘಡ ಸಂಭವಿಸಿದೆ. ಬಾಲಕನಿಗಾಗಿ ಅಗ್ನಿಶಾಮಕ ದಳದವರು ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಸದಲಗಾ ಪಿಎಸ್ಐ ಸಂಗಮೇಶ ದಿಡಿಗಿನಾಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನದಿಗಳ ಮಟ್ಟ ಏರಿಕೆ: ತಾಲೂಕು ಸೇರಿದಂತೆ ನೆರೆಯ ಮಹಾರಾಷ್ಟ್ರದಲ್ಲಿ ಶನಿವಾರ ಮಳೆಯ ಅಬ್ಬರ ಸ್ವಲ್ಪ ಕಡಿಮೆಯಾಗಿದೆ. ಆದರೂ ಕೃಷ್ಣೆಯ ಉಗಮ ಸ್ಥಾನ ಮಹಾಬಳೇಶ್ವರ ಸೇರಿದಂತೆ ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಸಾಧಾರಣ ಮಳೆ ಮುಂದುವರಿದಿದ್ದರಿಂದ ಕೃಷ್ಣಾ ಹಾಗೂ ಉಪನದಿಗಳ ನೀರಿನ ಮಟ್ಟದಲ್ಲಿ ಮತ್ತಷ್ಟು ಏರಿಕೆ ಕಂಡು ಬಂದಿದೆ.
ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್ ಮುಖಾಂತರ ಕೃಷ್ಣಾ ನದಿಗೆ 1,03,797 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಹಿಪ್ಪರಗಿ ಬ್ಯಾರೇಜ್ನಿಂದ 93500 ಕ್ಯೂಸೆಕ್ ನೀರನ್ನು ಹೊರಗೆ ಹರಿ ಬಿಡಲಾಗುತ್ತಿದೆ. ತಾಲೂಕಿನ ಜಲಾವೃತ ಕೆಳಹಂತದ ಆರು ಸೇತುವೆಗಳು ಅದೇ ಸ್ಥಿತಿಯಲ್ಲಿವೆ.