ಗೋಕಾಕ : ''ಸಕ್ಕರೆ ಕಾರ್ಖಾನೆಗಳಿಗೆ ರೈತರು ಕಬ್ಬು ಕಳಿಸಿ 4 ತಿಂಗಳು ಕಳೆದಿದೆ. ಅಲ್ಲದೆ 2 ತಿಂಗಳ ಹಿಂದೆಯೇ ಕಬ್ಬು ನುರಿಸುವ ಹಂಗಾಮು ಮುಗಿದಿದೆ. ಆದರೂ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಇದುವರೆಗೂ ರೈತರಿಗೆ ಕಬ್ಬಿನ ಬಿಲ್ ಪಾವತಿಸಿಲ್ಲ'' ಎಂದು ಆರೋಪಿಸಿದ ರೈತ ಸಂಘದ ರಾಜ್ಯ ಕಾರ್ಯದರ್ಶಿ ಭೀಮಶಿ ಗದಾಡಿ ಅವರು, ಈ ಕೂಡಲೇ ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ 8 ದಿನದೊಳಗೆ ರೈತರ ಬಿಲ್ ಪಾವತಿಸುವ ವ್ಯವಸ್ಥೆ ಮಾಡಬೇಕು. ಇಲ್ಲವಾದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ಶನಿವಾರ ನಗರದ ತಹಸೀಲ್ದಾರ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಸಿಲಿನ ಬೇಗೆಯಿಂದ ಜಿಲ್ಲೆಯ ರೈತರ ಬೆಳೆಗಳು ಈಗಾಗಲೇ ಒಣಗಿವೆ. ಕೂಡಲೇ ಕಂದಾಯ ಇಲಾಖೆ ಹಾಗೂ ಕೃಷಿ ಇಲಾಖೆ ಸಮೀಕ್ಷೆ ನಡೆಸಿ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ನೀಡಬೇಕು. ಕುಡಿಯುವ ನೀರು ವ್ಯವಸ್ಥೆಯ ಜತೆಗೆ ಜಾನುವಾರುಗಳಿಗಾಗಿ ಮೇವು ಬ್ಯಾಂಕ್ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.
ಸರಕಾರ ರೈತರ ಸಾಲಮನ್ನಾ ಘೋಷಿಸಿದ್ದರೂ ಬ್ಯಾಂಕ್ನವರು ರೈತರಿಗೆ ನೋಟಿಸ್ ಕಳುಹಿಸುತ್ತಿದ್ದಾರೆ. ಇದರಿಂದ ರಾಮದುರ್ಗ ತಾಲೂಕಿನ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಮುಂದೆ ಬ್ಯಾಂಕ್ನಿಂದ ರೈತರಿಗೆ ನೋಟಿಸ್ ಬಂದರೆ ಆಯಾ ಬ್ಯಾಂಕ್ ಶಾಖೆಗಳ ಮುಂದೆ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಸತ್ತೆಪ್ಪ ಮಲ್ಲಾಪುರೆ, ಜಿಲ್ಲಾ ಉಪಾಧ್ಯಕ್ಷ ಗೋಪಾಲ ಕುಕನೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭರಮು ಖೆಮಲಾಪುರೆ, ತಾಲೂಕಾಧ್ಯಕ್ಷ ಮುತ್ತೆಪ್ಪ ಬಾಗನ್ನವರ, ಗೌರವಾಧ್ಯಕ್ಷ ರಾಜಪ್ಪ ಹೂಲಿಕಟ್ಟಿ, ಕಾಯದರ್ಶಿ ಯಲ್ಲಪ್ಪ ತಿಗಡಿ, ಸಿದ್ದಪ್ಪ ತಪಸಿ, ಆನಂದ ಹೂಲಿಕಟ್ಟಿ ಇದ್ದರು.
ಶನಿವಾರ ನಗರದ ತಹಸೀಲ್ದಾರ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಸಿಲಿನ ಬೇಗೆಯಿಂದ ಜಿಲ್ಲೆಯ ರೈತರ ಬೆಳೆಗಳು ಈಗಾಗಲೇ ಒಣಗಿವೆ. ಕೂಡಲೇ ಕಂದಾಯ ಇಲಾಖೆ ಹಾಗೂ ಕೃಷಿ ಇಲಾಖೆ ಸಮೀಕ್ಷೆ ನಡೆಸಿ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ನೀಡಬೇಕು. ಕುಡಿಯುವ ನೀರು ವ್ಯವಸ್ಥೆಯ ಜತೆಗೆ ಜಾನುವಾರುಗಳಿಗಾಗಿ ಮೇವು ಬ್ಯಾಂಕ್ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.
ಸರಕಾರ ರೈತರ ಸಾಲಮನ್ನಾ ಘೋಷಿಸಿದ್ದರೂ ಬ್ಯಾಂಕ್ನವರು ರೈತರಿಗೆ ನೋಟಿಸ್ ಕಳುಹಿಸುತ್ತಿದ್ದಾರೆ. ಇದರಿಂದ ರಾಮದುರ್ಗ ತಾಲೂಕಿನ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಮುಂದೆ ಬ್ಯಾಂಕ್ನಿಂದ ರೈತರಿಗೆ ನೋಟಿಸ್ ಬಂದರೆ ಆಯಾ ಬ್ಯಾಂಕ್ ಶಾಖೆಗಳ ಮುಂದೆ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಸತ್ತೆಪ್ಪ ಮಲ್ಲಾಪುರೆ, ಜಿಲ್ಲಾ ಉಪಾಧ್ಯಕ್ಷ ಗೋಪಾಲ ಕುಕನೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭರಮು ಖೆಮಲಾಪುರೆ, ತಾಲೂಕಾಧ್ಯಕ್ಷ ಮುತ್ತೆಪ್ಪ ಬಾಗನ್ನವರ, ಗೌರವಾಧ್ಯಕ್ಷ ರಾಜಪ್ಪ ಹೂಲಿಕಟ್ಟಿ, ಕಾಯದರ್ಶಿ ಯಲ್ಲಪ್ಪ ತಿಗಡಿ, ಸಿದ್ದಪ್ಪ ತಪಸಿ, ಆನಂದ ಹೂಲಿಕಟ್ಟಿ ಇದ್ದರು.