ಆ್ಯಪ್ನಗರ

ಛತ್ರಪತಿ ಶಿವಾಜಿ ಮಹಾರಾಜರ ಬೃಹತ್‌ ಮೂರ್ತಿ ಸ್ಥಾಪನೆ

ಬೆಳಗಾವಿ: ಛತ್ರಪತಿ ಶಿವಾಜಿ ಮಹಾರಾಜರ ಬೃಹತ್‌ ಮೂರ್ತಿ ಸ್ಥಾಪನೆ ...

Vijaya Karnataka 28 Jan 2020, 5:00 am
ಬೆಳಗಾವಿ: ಛತ್ರಪತಿ ಶಿವಾಜಿ ಮಹಾರಾಜರ ಬೃಹತ್‌ ಮೂರ್ತಿ ಸ್ಥಾಪಿಸುವುದಾಗಿ ಗ್ರಾಮೀಣ ಕ್ಷೇತ್ರದ ಮತದಾರರಿಗೆ ಚುನಾವಣೆಗೂ ಪೂರ್ವ ನೀಡಿದ್ದ ಭರವಸೆ ಈಡೇರಿಸುತ್ತಿದ್ದೇನೆ. ಇದು ನನ್ನ ಪಾಲಿಗೆ ಅತ್ಯಂತ ಅಭಿಮಾನ, ಗರ್ವದ ಕ್ಷಣ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.
Vijaya Karnataka Web 27LBS8_53
ರಾಜಹಂಸಗಢ ಕೋಟೆ ಅಭಿವೃದ್ಧಿ ಕಾಮಗಾರಿ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ಸ್ಥಾಪಿಸುವ ಕೆಲಸಕ್ಕೆ ಭೂಮಿ ಪೂಜೆ ಕಾರ‍್ಯಕ್ರಮದಲ್ಲಿಶಾಸಕಿ ಲಕ್ಷ್ಮೇ ಹೆಬ್ಬಾಳಕರ್‌ ಮಾತನಾಡಿದರು.


ತಾಲೂಕಿನ ರಾಜಹಂಸಗಢ ಕೋಟೆಯಲ್ಲಿ3.5 ಕೋಟಿ ರೂ. ವೆಚ್ಚದಲ್ಲಿಆರಂಭಿಸಲಾದ ಅಭಿವೃದ್ಧಿ ಕಾಮಗಾರಿಗಳು, ಸುಶೋಭೀಕರಣ ಕೆಲಸ ಹಾಗೂ ಕೋಟೆಯಲ್ಲಿಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ಸ್ಥಾಪಿಸುವ ಕೆಲಸಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿ, ಮುಂದಿನ ಪೀಳಿಗೆಗೆ ನಮ್ಮ ಸಂಸ್ಕೃತಿ ತಿಳಿಸಲು, ನಮ್ಮ ಪರಂಪರೆಯ ರಕ್ಷಣೆಗಾಗಿ ಶಿವಾಜಿ ಮಹಾರಾಜರ ಪುತ್ಥಳಿಯನ್ನು ನಿರ್ಮಾಣ ಮಾಡಲಾಗುತ್ತಿದೆ. ಸುವರ್ಣ ವಿಧಾನ ಸೌಧದ ಎದುರಿನಿಂದ ಕಾಣುವಂತೆ 50 ಅಡಿ ಎತ್ತರದ ಶಿವಾಜಿ ಮಹಾರಾಜರ ಮೂರ್ತಿ ಇಲ್ಲಿನಿರ್ಮಾಣವಾಗಲಿದೆ. ಅಲ್ಲದೆ, ಕೆಲವೇ ದಿನಗಳಲ್ಲಿರಾಜಹಂಸಗಢ ಕೋಟೆ ಪ್ರವಾಸಿ ತಾಣವಾಗಿ ಮಾರ್ಪಡುವುದರಲ್ಲಿಯಾವುದೇ ಸಂಶಯವಿಲ್ಲಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಅಧಿಕಾರಿಗಳು, ಎಂಜಿನಿಯರ್‌ಗಳು, ಮೂರ್ತಿ ತಯಾರಕರನ್ನು ಸಮಾರಂಭದಲ್ಲಿಸತ್ಕರಿಸಲಾಯಿತು. ಮೂರ್ತಿ ತಯಾರಿಸಲು 50 ಲಕ್ಷ ರೂ.ಗಳ ಚೆಕ್‌ನ್ನು ಮೂರ್ತಿಕಾರ ವಿಕ್ರಮ ಪಾಟೀಲ ಅವರಿಗೆ ಹಸ್ತಾಂತರಿಸಲಾಯಿತು.

ಶ್ರೀರಾಮ ಸೇನೆ ಅಧ್ಯಕ್ಷ ರಮಾಕಾಂತ ಕೊಂಡಸ್ಕರ್‌, ಶಿವಪ್ರತಿಷ್ಠಾನ ಅಧ್ಯಕ್ಷ ಕಿರಣ ಗಾವಡೆ, ಕೋಟೆ ಸಿದ್ಧೇಶ್ವರ ದೇವಸ್ಥಾನದ ಪಂಚ ಕಮಿಟಿ ಸದಸ್ಯ ಸಿದ್ದಪ್ಪ ಛತ್ರೆ, ಸುಳಗಾ ಗ್ರಾಪಂ ಅಧ್ಯಕ್ಷ ಅರವಿಂದ ಪಾಟೀಲ, ಯುವ ಮುಖಂಡ ಮೃಣಾಲ ಹೆಬ್ಬಾಳಕರ್‌ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕೆರೆ ತುಂಬಿಸುವ ಯೋಜನೆಗೆ ಆದ್ಯತೆ
ಗ್ರಾಮೀಣ ಕ್ಷೇತ್ರದ ಶೇ. 90ಕ್ಕೂ ಅಧಿಕ ಜನ ಕೃಷಿಯನ್ನು ಅವಲಂಬಿಸಿ ಬದುಕುತ್ತಿದ್ದಾರೆ. ಹಾಗಾಗಿ ಕ್ಷೇತ್ರದಲ್ಲಿಕೆರೆಗಳನ್ನು ತುಂಬಿಸುವ, ಬಾಂದಾರ ಮತ್ತು ಡ್ಯಾಂಗಳನ್ನು ನಿರ್ಮಿಸುವ ಕೆಲಸಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದೇನೆ. ಇನ್ನೊಂದು ವರ್ಷದಲ್ಲಿಕ್ಷೇತ್ರದ 83 ಹಳ್ಳಿಗಳಿಗೆ ಮಲಪ್ರಭಾ ನದಿ ನೀರು ಪೂರೈಸುವ ಯೋಜನೆ ಕಾರ್ಯಗತಗೊಳ್ಳಲಿದೆ. ಇದರಿಂದ ಹಳ್ಳಿಗಳ ಕೆರೆಗಳು ತುಂಬಿಕೊಂಡು ಕೃಷಿಕರಿಗೆ ಅನುಕೂಲವಾಗಲಿದೆ ಎಂದು ಶಾಸಕಿ ಲಕ್ಷ್ಮೇ ಹೆಬ್ಬಾಳಕರ್‌ ತಿಳಿಸಿದರು.

ನಾನು ಶಾಸಕಿಯಾಗಿ 18 ತಿಂಗಳ ಅವಧಿಯಲ್ಲಿ ಕ್ಷೇತ್ರಕ್ಕೆ 1, 200 ಕೋಟಿ ರೂ. ಅನುದಾನ ತಂದಿದ್ದೇನೆ. ಬೆಳಗಾವಿ ಗ್ರಾಮೀಣ ಕ್ಷೇತ್ರವು ಕನ್ನಡ ಹಾಗೂ ಮರಾಠಿ ಭಾಷಿಕರ ಪವಿತ್ರ ಸಂಗಮದಂತಿದೆ. ಇಲ್ಲಿನ 112 ಹಳ್ಳಿಗಳಲ್ಲಿಅರ್ಧದಷ್ಟು ಕನ್ನಡ ಹಾಗೂ ಇನ್ನರ್ಧ ಮರಾಠಿ ಭಾಷಿಕರಿಂದ ಕೂಡಿವೆ. ನಾವೆಲ್ಲರೂ ಬಹಳ ಅನ್ಯೋನ್ಯವಾಗಿ ಬದುಕುತ್ತಿದ್ದೇವೆ.
-ಲಕ್ಷ್ಮೀ ಹೆಬ್ಬಾಳಕರ, ಶಾಸಕಿ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ