ಆ್ಯಪ್ನಗರ

ಆರ್ಥಿಕ ಪ್ರಗತಿಗೆ ಮೋದಿ ಆರ್ಥಿಕ ನೀತಿಯೇ ಕಾರಣ

ಬೈಲಹೊಂಗಲ : ಭಾರತ ಅಂದು ಸಾಲಗಾರ ದೇಶವಾಗಿತ್ತು, ಇಂದು ಸಾಲ ಕೊಡುವ ದೇಶವಾಗಿ ಬೆಳೆದಿದೆ. ...

Vijaya Karnataka 14 Apr 2019, 5:00 am
ಬೈಲಹೊಂಗಲ : ಭಾರತ ಅಂದು ಸಾಲಗಾರ ದೇಶವಾಗಿತ್ತು, ಇಂದು ಸಾಲ ಕೊಡುವ ದೇಶವಾಗಿ ಬೆಳೆದಿದೆ. ಇದಕ್ಕೆಲ್ಲ ಪ್ರಧಾನಿ ನರೇಂದ್ರ ಮೋದಿಯವರ ಆರ್ಥಿಕ ನೀತಿಯೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದರು.
Vijaya Karnataka Web BEL-13HTP1


ಪಟ್ಟಣದ ಎಂಕೆಸಿಆರ್‌ ಹೈಸ್ಕೂಲ್‌ ಮೈದಾನದಲ್ಲಿ ನಡೆದ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್‌ ಅಂಗಡಿಯವರ ಚುನಾವಣಾ ಪ್ರಚಾರ ಸಭೆ ಉದ್ಘಾಟಿಸಿ ಶನಿವಾರ ಅವರು ಮಾತನಾಡಿದರು.

''ವಿಶ್ವದ ಅಗ್ರಗಣ್ಯ ರಾಷ್ಟ್ರಗಳು ಪ್ರಧಾನಿ ಮೋದಿಯವರ ಆಡಳಿತ ವೈಖರಿಯನ್ನು ಮೆಚ್ಚಿ ಗೌರವಿಸುತ್ತಿದ್ದರೆ, ಕಾಂಗ್ರೆಸ್‌ನವರು ಅವರ ಕುರಿತು ಹಗುರವಾಗಿ ಮಾತನಾಡುತ್ತಿರುವುದು ಹಾಸ್ಯಾಸ್ಪದ. ಈ ಹಿಂದೆ ಕಾಂಗ್ರೆಸ್‌ ಸರಕಾರ ಇದ್ದಾಗ ಸಹ ತೆರಿಗೆ ಹಣ ಸಂಗ್ರಹವಾಗುತ್ತಿತ್ತು. ಇಂದು ಕೂಡಾ ತೆರಿಗೆ ಸಂಗ್ರಹವಾಗುತ್ತದೆ. ಹಾಗಾದರೆ, ಕಾಂಗ್ರೆಸ್‌ ಇದ್ದಾಗ ಅಭಿವೃದ್ಧಿ ಕಾರ್ಯಗಳು ಏಕೆ ಆಗುತ್ತಿರಲಿಲ್ಲ? ಈ ಕುರಿತು ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳುವುದು ಪ್ರತಿಯೊಬ್ಬ ಭಾರತೀಯರ ಕರ್ತವ್ಯ'', ಎಂದರು.

ಮೋದಿ ಕೈಬಲಪಡಿಸಿ: ಸಂಸದ ಸುರೇಶ್‌ ಅಂಗಡಿ, ''ಆರ್ಥಿಕ ಸುಧಾರಣೆ ಮಟ್ಟದಲ್ಲಿ ಭಾರತ ಜಗತ್ತಿನಲ್ಲೇ ನಾಲ್ಕನೇ ಸ್ಥಾನದಲ್ಲಿದೆ. ಎನ್‌ಡಿಎ ಅಧಿಕಾರ ಅವಧಿಯಲ್ಲಿ ಸೈನಿಕರ ಮನೋಬಲ ಹೆಚ್ಚಿಸಲು ಸಾಕಷ್ಟು ಅನುವು ಮಾಡಿಕೊಟ್ಟಿದ್ದಾರೆ. ದೇಶದ ಸಮಗ್ರ ಅಭಿವೃದ್ಧಿಗಾಗಿ ಮತ್ತೊಮ್ಮೆ ಮೋದಿಯವರ ಕೈ ಬಲಪಡಿಸಬೇಕಾಗಿದೆ'', ಎಂದರು.

ಜಿಲ್ಲಾ ಬಿಜೆಪಿ ಗ್ರಾಮೀಣ ಅಧ್ಯಕ್ಷ ಡಾ.ವಿಶ್ವನಾಥ ಪಾಟೀಲ, ವಿಧಾನ ಪರಿಷತ್‌ ವಿರೋಧ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಮಾಜಿ ಶಾಸಕ ಜಗದೀಶ ಮೆಟಗುಡ್ಡ ಮೊದಲಾದವರು ಬಿಜೆಪಿ ಅಭ್ಯರ್ಥಿಯನ್ನು ವಿಜಯಶಾಲಿಯಾಗಿಸಲು ಎಲ್ಲರೂ ಪಣ ತೊಡಬೇಕೆಂದರು. ವಿಧಾನಪರಿಷತ್‌ ಸದಸ್ಯ ಹಣಮಂತ ನಿರಾಣಿ, ಮುಖಂಡರಾದ ಈರಣ್ಣ ಕಡಾಡಿ, ಜಗದೀಶ ಹಿರೇಮನಿ, ಮುಕ್ತಾರ ಪಠಾಣ, ಗೂಳಪ್ಪ ಹೊಸಮನಿ, ರಾಜಕುಮಾರ ಟೋಪಣ್ಣವರ, ರಾಜು ಚಿಕ್ಕನಗೌಡರ, ಶ್ರೀಶೈಲ ಯಡಳ್ಳಿ, ಪ್ರಭುಲಿಂಗ ಹೂಗಾರ, ಬ್ಲಾಕ್‌ ಅಧ್ಯಕ್ಷ ಮಡಿವಾಳಪ್ಪ ಹೋಟಿ ಹಾಗೂ ಸಾವಿರಾರು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು. ಗುರುಪಾದ ಕಳ್ಳಿ ಸ್ವಾಗತಿಸಿದರು. ಧನಂಜಯ ಜಾಧವ ನಿರೂಪಿಸಿದರು. ಮಲ್ಲನಗೌಡ ಗೌಡತಿ ವಂದಿಸಿದರು.

ಸಿಎಂ ಕುಮಾರಸ್ವಾಮಿ ಇತ್ತೀಚಿನ ದಿನಗಳಲ್ಲಿ ತಲೆ ಕೆಟ್ಟು ಏನೇನೋ ಮಾತನಾಡುತ್ತಿದ್ದಾರೆ. ಎರಡು ಹೊತ್ತು ಊಟಕ್ಕೆ ಗತಿ ಇಲ್ಲದವರು ಸೈನ್ಯಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂಬ ಮಾತುಗಳನ್ನಾಡಿ ಸೈನಿಕರನ್ನು ಅವಮಾನ ಮಾಡಿದ್ದಾರೆ. ಇಂಥವರಿಗೆ ಜನರೇ ಬುದ್ಧಿ ಕಲಿಸುತ್ತಾರೆ.
- ಬಿ.ಎಸ್‌. ಯಡಿಯೂರಪ್ಪ, ಮಾಜಿ ಸಿಎಂ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ