ಆ್ಯಪ್ನಗರ

ಮೂತ್ರ ವಿಸರ್ಜನೆ ಮಾಡುತ್ತಿದ್ದ ವ್ಯಕ್ತಿ ಕೊಲೆ

ಗ್ರಾಮದಲ್ಲಿ ಶುಕ್ರವಾರ ಸಂಜೆ ಮೂತ್ರ ವಿಸರ್ಜನೆ ಮಾಡುತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಗ್ರಾಮದ ನಾಗರಾಜ ಲಕ್ಷ್ಮಣ ಭಜಂತ್ರಿ (27) ಕೊಲೆಯಾದ ವ್ಯಕ್ತಿ...

Vijaya Karnataka 14 Apr 2019, 5:00 am
ಸುರೇಬಾನ: ಗ್ರಾಮದಲ್ಲಿ ಶುಕ್ರವಾರ ಸಂಜೆ ಮೂತ್ರ ವಿಸರ್ಜನೆ ಮಾಡುತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ.
Vijaya Karnataka Web the person who was urinating was murdered
ಮೂತ್ರ ವಿಸರ್ಜನೆ ಮಾಡುತ್ತಿದ್ದ ವ್ಯಕ್ತಿ ಕೊಲೆ


ಗ್ರಾಮದ ನಾಗರಾಜ ಲಕ್ಷ್ಮಣ ಭಜಂತ್ರಿ (27) ಕೊಲೆಯಾದ ವ್ಯಕ್ತಿ. ಗ್ರಾಮದ ಮಲಪ್ರಭಾ ಬಲದಂಡೆ ಕಾಲುವೆ ಬಳಿ ಮೂತ್ರ ವಿಸರ್ಜನೆ ಮಾಡುವಾಗ ನಾಗರಾಜ ಭಜಂತ್ರಿ ಬಳಿ ಬಂದ ಇಬ್ಬರು ವ್ಯಕ್ತಿಗಳು ಮೂತ್ರ ವಿಸರ್ಜನೆ ವಿಷಯವಾಗಿ ವಾಗ್ವಾದ ನಡೆಸಿದ್ದಾರೆ. ನಂತರ ಜಾತಿ ನಿಂದನೆ ಮಾಡಿ ಕೊಡಲಿ ಮತ್ತು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ನಾಗರಾಜ ಭಜಂತ್ರಿಯನ್ನು ಬಾಗಲಕೋಟೆ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಈ ಕುರಿತು ಭಜಂತ್ರಿ ಕುಟುಂಬದ ಸದಸ್ಯರು ರಾಮದುರ್ಗ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನ ಹಿನ್ನೆಲೆಯಲ್ಲಿ ಮಹಾಂತೇಶ ಪಾಟೀಲ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ. ಡಿಎಸ್ಪಿ ಬಿ.ಎಸ್‌.ಪಾಟೀಲ ನೇತೃತ್ವದಲ್ಲಿ ಪಿಎಸ್‌ಐ ಸುನಿಲಕುಮಾರ ನಾಯಕ್‌ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ