ಆ್ಯಪ್ನಗರ

ಉಕ ಅಭಿವೃದ್ಧಿಗೆ ಆದ್ಯತೆ ನೀಡಲು ಆಗ್ರಹ

ಬೆಳಗಾವಿ: ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ವಿಶೇಷ ಆದ್ಯತೆ ...

Vijaya Karnataka 23 Feb 2020, 5:00 am
ಬೆಳಗಾವಿ: ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಬೇಕೆಂದು ಆಗ್ರಹಿಸಿ ಉತ್ತರ ಕರ್ನಾಟಕ ಜನಸಂಗ್ರಾಮ ಪರಿಷತ್ತಿನ ಸದಸ್ಯರು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
Vijaya Karnataka Web 22BGM2062105
ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಬೇಕೆಂದು ಆಗ್ರಹಿಸಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದ ಉತ್ತರ ಕರ್ನಾಟಕ ಜನಸಂಗ್ರಾಮ ಪರಿಷತ್ತಿನ ಸದಸ್ಯರು.


ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ)ಅಧ್ಯಕ್ಷ ಘೂಳಪ್ಪ ಹೊಸಮನಿ ನೇತೃತ್ವದಲ್ಲಿಶನಿವಾರ ಸಚಿವರನ್ನು ಭೇಟಿ ಮಾಡಿದ ಸದಸ್ಯರು, ಬೆಳಗಾವಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಭಾಗದಲ್ಲಿನನೆಗುದ್ದಿಗೆ ಬಿದ್ದಿರುವ ನೀರಾವರಿ ಯೋಜನೆಗಳ ಅನುಷ್ಠಾನದ ಜತೆಗೆ ಹೊಸ ಯೋಜನೆಗಳ ನಿರ್ಮಾಣಕ್ಕೆ ಮುಂದಾಗಬೇಕು. ಸುವರ್ಣ ವಿಧಾನಸೌಧಕ್ಕೆ ಪ್ರಮುಖ ಖಾತೆಗಳ ಕಚೇರಿಗಳು, ಗಡಿ ಅಭಿವೃದ್ಧಿ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಚೇರಿಗಳನ್ನೂ ಸ್ಥಳಾಂತರಿಸಬೇಕು. ಕೇಂದ್ರದ ಅರಣ್ಯ ಹಾಗೂ ಪರಿಸರ ಇಲಾಖೆಯ ಅಧೀನದಲ್ಲಿರುವ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯವನ್ನು ಬೇರೆಡೆಗೆ ಸ್ಥಳಾಂತರಕ್ಕೆ ಗುರುತಿಸಲಾಗಿರುವ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಬಳಿ ಇರುವ ಮಲ್ಲಪ್ಪನ ಗುಡ್ಡದ ಬಳಿಯ ಗಾಯರಾಣ ಜಾಗ ಹಸ್ತಾಂತರಗೊಳ್ಳಬೇಕು. ತಿಗಡಿ ಹರಿನಾಲಾದಿಂದ ಹಿರೇಬಾಗೇವಾಡಿಗೆ ಕಾಲುವೆ ನಿರ್ಮಿಸಿ ನೀರು ಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಮಂಜುನಾಥ ವಸ್ತ್ರದ, ರೈತ ಮುಖಂಡ ಬಿ.ಎಸ್‌. ಗಾಣಗಿ, ಸಿದ್ಧಾರೂಢ ಹೊನ್ನನ್ನವರ, ಪರ್ವೇಜ್‌ ದೇವಲಾಪುರ, ಪ್ರಭು ಬೂದಯ್ಯನವರಮಠ, ಅನ್ವರ್‌ ದೇವಡಿ, ಯಾಕೂಬ ದೇವಲಾಪುರ, ಗ್ರಾಪಂ ಸದಸ್ಯರಾದ ಸಂಜಯ ದೇಸಾಯಿ, ರಾಜಶೇಖರ ಪಾಟೀಲ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ